ನವದೆಹಲಿ (ಅ.11): ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಇತರ ಖಾತೆಗಳನ್ನು ಹಣಕಾಸು ಸಚಿವ ಒ.ಪನ್ನೀರ್ ಸೆಲ್ವಂಗೆ ವಹಿಸಲಾಗಿದೆ.

ನವದೆಹಲಿ (ಅ.11): ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಇತರ ಖಾತೆಗಳನ್ನು ಹಣಕಾಸು ಸಚಿವ ಒ.ಪನ್ನೀರ್ ಸೆಲ್ವಂಗೆ ವಹಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸುವ ಅಧಿಕಾರವನ್ನು ಪನ್ನೀರ್ ಸೆಲ್ವಂಗೆ ನೀಡಲಾಗಿದೆ.

ತಮಿಳುನಾಡು ಸಿಎಂ ಜಯಲಲಿತಾ ಕಳೆದ 3 ವಾರಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಹಣಕಾಸು ಸಚಿವ ಪನ್ನೀರ್ ಸೆಲ್ವಂಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಜಯಲಲಿತಾರ ಸಲಹೆ ಮೇರೆಗೆ ಈ ಕ್ರಮ ಕೈಗೊಂಡಿರುವುದಾಗಿ ತಮಿಳುನಾಡು ರಾಜಭವನ ಪ್ರಕಟಣೆ ತಿಳಿಸಿದ್ದು ಜಯಲಲಿತಾ ಗುಣಮುಖರಾಗುವ ತನಕ ಈ ವ್ಯವಸ್ಥೆ ಮುಂದುವರೆಯಲಿದೆ.