Asianet Suvarna News Asianet Suvarna News

ಹಾಲಿ ಸಚಿವನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್..!

1998ರಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದ ಹಾಲಿ ಸಚಿವನಿಗೆ 3 ವರ್ಷ ಜೈಲು ಹಾಗೂ 10,500 ರು. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು ಆ ಸಚಿವ?

Tamil Nadu sports minister Balakrishna Reddy sentenced to three years imprisonment
Author
Bengaluru, First Published Jan 7, 2019, 9:20 PM IST

ಚೆನ್ನೈ, [ಜ.07]:  ತಮಿಳುನಾಡಿನ ಹಾಲಿ ಯುವಜನ ಕಲ್ಯಾಣ ಮತ್ತು ಕ್ರೀಡಾ ಸಚಿವ ಬಾಲಕೃಷ್ಣ ರೆಡ್ಡಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. 

1998ರಲ್ಲಿ ಎಐಎಡಿಎಂಕೆ ಪಕ್ಷ ಕೈಗೊಂಡಿದ್ದ ಪ್ರತಿಭಟನೆ ವೇಳೆ ಕಲ್ಲು ತೂರಾಟ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಬಾಲಕೃಷ್ಣ ರೆಡ್ಡಿಗೆ 3 ವರ್ಷ ಜೈಲು ಹಾಗೂ 10,500 ರು. ದಂಡ ವಿಧಿಸಿ ಆದೇಶ ಹೊರಡಿಸಿದೆ.

1998 ರಲ್ಲಿ ಎಐಎಡಿಎಂಕೆ ಪಕ್ಷ ಕೈಗೊಂಡಿದ್ದ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಸಾರ್ವಜನಿಕ ಆಸ್ತಿ, ಪಾಸ್ತಿಗೆ ಹಾನಿ ಮಾಡಿರುವ ಸಂಬಂಧ ಬಾಲಕೃಷ್ಣ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. 

ಪ್ರತಿಭಟನೆ ವೇಲೆ ಬಾಲಕೃಷ್ಣ ರೆಡ್ಡಿ ಅಪರಾಧ ಚಟುವಟಿಕೆಯಲ್ಲಿ ತೊಡಗಿರೋದು ಸಾಬೀತಾದ ಹಿನ್ನೆಲೆಯಲ್ಲಿ ಇಂದು [ಸೋಮವಾರ] ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಇನ್ನು  ಬಾಲಕೃಷ್ಣ ರೆಡ್ಡಿ ಅವರು ಕೋರ್ಟ್​ ತೀರ್ಪು ಪ್ರಶ್ನಿಸಿ ನಾಳೆ (ಸೋಮವಾರ) ಮದ್ರಾಸ್​ ಹೈಕೋರ್ಟ್​ ಮೆಟ್ಟಿಲೇರಲಿರುವ ಸಾಧ್ಯತೆಗಳಿವೆ.

Follow Us:
Download App:
  • android
  • ios