ಕಾವೇರಿ ನದಿ ನಿರ್ವಹಣಾ ಮಂಡಳಿ ರಚಿಸಬೇಕೆಂದು ಆಗ್ರಹಿಸಿ ಚೆನ್ನೈನಲ್ಲಿ ರೈತರು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ
ಚೆನ್ನೈ (ಅ.17): ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ರೈತರು ಬೀದಿಗಿಳಿದಿದ್ದಾರೆ.
ಕಾವೇರಿ ನದಿ ನಿರ್ವಹಣಾ ಮಂಡಳಿ ರಚಿಸಬೇಕೆಂದು ಆಗ್ರಹಿಸಿ ಚೆನ್ನೈನಲ್ಲಿ ರೈತರು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ.
ರೈಲ್ ರೋಖೋ ಚಳವಳಿ ನಡೆಸಿದ ರೈತರು, ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿದ್ದಾರೆ. ಡಿಎಂಕೆ ನಾಯಕ ಸ್ಟಾಲಿನ್ ನೇತೃತ್ವದಲ್ಲಿ 48 ಗಂಟೆಗಳ ಕಾಲ ಪ್ರತಿಭಟನೆಗೆ ಮುಂದಾಗಿದ್ದಾರೆ.
ನಾಳೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಐತಿಹಾಸಿಕ ತೀರ್ಪು ಬರುವ ಹಿನ್ನೆಲೆಯಲ್ಲಿ ಎಲ್ಲರ ಚಿತ್ತ ಸುಪ್ರೀಕೋರ್ಟ್ನತ್ತ ನೆಟ್ಟಿದೆ.
