ಸಾವಿನ ’ಯೋಗ’
ಯೋಗ ದಿನಾಚರಣೆ ಕಾರ್ಯಕ್ರಮದಲ್ಲೇ ಹೃದಯಾಘಾತದಿಂದ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ. ತೇರದಾಳ ಪಟ್ಟಣದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.
ಬಾಗಲಕೋಟೆ (ಜೂ. 21): ಯೋಗ ದಿನಾಚರಣೆ ಕಾರ್ಯಕ್ರಮದಲ್ಲೇ ಹೃದಯಾಘಾತದಿಂದ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ. ತೇರದಾಳ ಪಟ್ಟಣದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.
ಯೋಗ ಮಾಡುವ ವೇಳೆ ಹೃದಯಾಘಾತದಿಂದ ಶಿಕ್ಷಕ ವಿಶ್ವನಾಥ ಬಿರಾದಾರ ಸಾವನ್ನಪ್ಪಿದ್ದಾರೆ. ಜೆವಿ ಮಂಡಳ ಕ್ಯಾಂಪಸ್ನಲ್ಲಿ ನಡೆಯುತ್ತಿದ್ದ ಯೋಗ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಶಿಕ್ಷಕರ ನಿಧನಕ್ಕೆ ಶಾಲಾ ಸಿಬ್ಬಂದಿ ಹಾಗೂ ಮಕ್ಕಳು ಆಘಾತಗೊಂಡಿದ್ದಾರೆ.
ಇಂದು ಅಂತರಾಷ್ಟ್ರೀಯ ವಿಶ್ವ ಯೋಗ ದಿನ. ವಿಶ್ವದಾದ್ಯಂತ ಜನರು ಯೋಗ ಮಾಡುವ ಮೂಲಕ ಈ ದಿನವನ್ನು ಸಂಪನ್ನವಾಗಿಸಿದ್ದಾರೆ. ಇದು ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನ. ಪ್ರಧಾನಿ ಮೋದಿಯವರು ಯೋಗ ದಿನವನ್ನು ಅಂತರಾಷ್ಟ್ರೀಯ ಮಟ್ಟಕ್ಕೇರಿಸಿದ್ದಾರೆ.