Asianet Suvarna News Asianet Suvarna News

10 ಸಾವಿರ ಬೆಲೆಬಾಳುವ ಮೊಬೈಲ್'ಗಾಗಿ ಟೆಕ್ಕಿಯನ್ನೇ ಕೊಂದರು

ಕೇವಲ 10 ಸಾವಿರ ಬೆಲೆಬಾಳುವ ಮೊಬೈಲ್​ ಆಸೆಗಾಗಿ ಟೆಕ್ಕಿಯೊಬ್ಬನನ್ನು  ಕೊಂದ ಘಟನೆ ಮೈಸೂರಿನಲ್ಲಿ ನಡೆದಿದೆ.  ಅಕ್ಟೋಬರ್ 18 ರಂದು ಈ ಘಟನೆ ನಡೆದಿದ್ದು,  ಮೃತಪಟ್ಟ ವ್ಯಕ್ತಿ ಬಳ್ಳಾರಿ ಮೂಲದ ಬಸವರಾಜ್​ ಹಳಗುಂಡಿ ಎಂದು ತಿಳಿದು ಬಂದಿದೆ.

Tecchie Killed For A Mobile

ಮೈಸೂರು(ಅ.30): ಕೇವಲ 10 ಸಾವಿರ ಬೆಲೆಬಾಳುವ ಮೊಬೈಲ್​ ಆಸೆಗಾಗಿ ಟೆಕ್ಕಿಯೊಬ್ಬನನ್ನು  ಕೊಂದ ಘಟನೆ ಮೈಸೂರಿನಲ್ಲಿ ನಡೆದಿದೆ.  ಅಕ್ಟೋಬರ್ 18 ರಂದು ಈ ಘಟನೆ ನಡೆದಿದ್ದು,  ಮೃತಪಟ್ಟ ವ್ಯಕ್ತಿ ಬಳ್ಳಾರಿ ಮೂಲದ ಬಸವರಾಜ್​ ಹಳಗುಂಡಿ ಎಂದು ತಿಳಿದು ಬಂದಿದೆ.

ಇತ್ತ ಖಾಸಗಿ ಕಂಪನಿಯಲ್ಲಿ ಮೆಕಾನಿಕಲ್​ ಇಂಜಿನಿಯರ್​ ಆಗಿದ್ದು, ಮೂವರು ದರೋಡೆಕೋರರು  ಇತನ ಕೈಯಲ್ಲಿದ ಮೊಬೈಲ್ ಆಸೆಗೆ ಬಿದ್ದು, ಅದನ್ನು ಕಸಿದುಕೊಳ್ಳುವ ಭರದಲ್ಲಿ ಆತನ ಹೃದಯವನ್ನೇ ಬಗೆದಿದ್ದಾರೆ. ಇಷ್ಟಾದರೂ ಪೊಲೀಸರಿಗೆ ಬಸವರಾಜು ಕೊಲೆ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.

ಆದರೆ ಈ ಮೂವರು ಖದೀಮರು ಬಸವರಾಜ್​ನ್ನು ಕೊಂದು ಆತನ ಬಳಿ ತೆಗೆದುಕೊಂಡು ಹೋಗಿದ್ದ ಮೊಬೈಲ್​ ಇದ್ದಕಿದ್ದಂತೆ ಸ್ವಿಚ್​ ಆನ್​ ಆದಾಗ ಪೊಲೀಸರಿಗೆ ಮೊದಲ ಸುಳಿವು ಸಿಕ್ಕಿತ್ತು. ಇದನ್ನೇ ಬೆನ್ನತ್ತಿ ಹೋದ ಪೊಲೀಸರು ಮೂವರು ದರೋಡೆಕೋರರು ಸಿಕ್ಕಿಬಿದ್ದಿದ್ದಾರೆ.

ಬಂಧಿತರನ್ನು ಮೈಸೂರಿನ ನಂದೀಶ್​ ಮತ್ತು ವಿನೋದ್​ ಹಾಗೂ ಮಂಡ್ಯದ ಮಂಜುನಾಥ್​ ಎನ್ನಲಾಗಿದೆ. ಆದರೆ ಕೇವಲ 10 ಸಾವಿರ ಬೆಲೆಯ ಮೊಬೈಲ್​ ಆಸೆಗಾಗಿ ಒಬ್ಬ ವ್ಯಕ್ತಿಯನ್ನೇ ಕೊಂದಿರುವುದು ಅಮಾನುಷವಾಗಿದೆ.

Follow Us:
Download App:
  • android
  • ios