ಚಂದ್ರಗ್ರಹಣ ಪ್ರಯುಕ್ತ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನ, ಪೂಜೆಗಳ ಸಮಯದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳವಾರ ಚಂದ್ರಗ್ರಹಣ ಸಂಭವಿಸಲಿದೆ. 

ಹುಬ್ಬಳ್ಳಿ/ಮಂಗಳೂರು: ಜು.16ರಂದು ನಡೆಯಲಿರುವ ಚಂದ್ರಗ್ರಹಣ ಪ್ರಯುಕ್ತ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನ, ಪೂಜೆಗಳ ಸಮಯದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. 

Add Asianetnews Kannada as a Preferred SourcegooglePreferred

ಎಲ್ಲ ದೇವಸ್ಥಾನಗಳಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನದ ಪೂಜೆ, ದರ್ಶನಗಳು ಯಥಾಪ್ರಕಾರ ನಡೆಯಲಿದೆ. ಸಂಜೆ ಪೂಜೆ, ದರ್ಶನಗಳ ವೇಳೆಯಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾತ್ರಿಯ ಮಹಾಪೂಜೆ ಸಂಜೆ 6.30ಕ್ಕೆ ನೆರವೇರಲಿದ್ದು, 7 ಗಂಟೆಗೆ ದೇವಳದ ಬಾಗಿಲು ಮುಚ್ಚಲಾಗುವುದು. ಆ ದಿನ ಸಾಯಂಕಾಲ ಆಶ್ಲೇಷ ಬಲಿ ಸೇವೆ, ರಾತ್ರಿ ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ. 

ಶಿರಸಿ ಮಾರಿಕಾಂಬಾ ದೇವಾಲಯದಲ್ಲೂ ಸಂಜೆ 7 ಗಂಟೆಯೊಳಗೆ ಮಹಾಪೂಜೆಯನ್ನು ನೆರವೇರಿಸಿ ದೇವಾಲಯದ ಬಾಗಿಲು ಹಾಕಲಾಗುತ್ತದೆ. ಕೊಪ್ಪಳ ತಾಲೂಕಿನ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಸಂಜೆ 6 ಗಂಟೆವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯ, ಇಡಗುಂಜಿ ವಿನಾಯಕ ದೇವಸ್ಥಾನಗಳದಲ್ಲಿ ಗ್ರಹಣ ಕಾಲದಲ್ಲಿ, ಅಂದರೆ ರಾತ್ರಿ 1.32ರಿಂದ ಮುಂಜಾನೆ 4.29ರವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ದೇವರಿಗೆ ಅಭಿಷೇಕ, ಪೂಜೆ ನೆರವೇರಲಿದೆ.