ಕೆಂಪು, ಹಳದಿಯೊಂದಿಗೆ ಬಿಳಿ ಬಣ್ಣವೂ ಇರುವ ನಾಡಧ್ವಜವನ್ನು ಸರಕಾರ ಕಳೆದ ಗುರುವಾರ ಅಂಗೀಕರಿಸಿದೆ ಹಾಲಿ ಚಾಲ್ತಿಯಲ್ಲಿರುವ ಧ್ವಜವನ್ನೇಕೆ ಸರ್ಕಾರ ಅಂಗೀಕರಿಸಿಲ್ಲವೆಂಬುವುದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ

ಬೆಂಗಳೂರು: ಕೆಂಪು, ಹಳದಿಯೊಂದಿಗೆ ಬಿಳಿ ಬಣ್ಣವೂ ಇರುವ ನಾಡಧ್ವಜವನ್ನು ಸರಕಾರ ಕಳೆದ ಗುರುವಾರ ಅಂಗೀಕರಿಸಿದೆ. ನೂತನ ಧ್ವಜ ಸ್ವರೂಪ, ವಿನ್ಯಾಸ ಹೇಗಿರಬೇಕು ಎಂಬಿತ್ಯಾದಿಗಳ ವಿಷಯಗಳ ಬಗ್ಗೆ ಸಾಕಾಷ್ಟು ಚರ್ಚೆ ನಡೆದಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕನ್ನಡಪರ ಸಂಘಟನೆಗಳು ಈಗಿರುವ (ಹಳದಿ ಮತ್ತು ಕೆಂಪು) ಧ್ವಜವನ್ನೇ ಅಧಿಕೃತ ನಾಡಧ್ವಜವಾಗಿ ಘೋಷಿಸಬೇಕೆಂದು ಪಟ್ಟು ಹಿಡಿದ್ದವು. ಆದರೆ ಸಾಕಷ್ಟು ಚರ್ಚೆಗಳ ಬಳಿ ಸರ್ಕಾರವು ಕೆಂಪು, ಬಿಳಿ, ಹಳದಿ ಬಣ್ಣವಿರುವ, ಹಾಗೂ ಸರ್ಕಾರದ ಲಾಂಛನವಿರುವ ವಿನ್ಯಾಸವನ್ನೇ ಅಂತಿಮಗೊಳಿಸಿದೆ.

ಹಾಲಿ ಚಾಲ್ತಿಯಲ್ಲಿರುವ ಧ್ವಜವನ್ನೇಕೆ ಸರ್ಕಾರ ಅಂಗೀಕರಿಸಿಲ್ಲವೆಂಬುವುದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ.

ನಾಡಧ್ವಜವನ್ನು ಅಂತಿಮಗೊಳಿಸಲು ರಚಿಸಲಾಗಿದ್ದ ಸಮಿತಿಯು ನೂತನ ವಿನ್ಯಾಸವನ್ನು ಅಂತಿಮಗೊಳಿಸಲು ಪ್ರಮುಖ ಕಾರಣವಿದೆ.

ಮೊದಲನೆದಾಗಿ, ಹಾಲಿ ಧ್ವಜದ ಮೇಲೆ ರಾಜಕೀಯ ಪಕ್ಷವೊಂದು ಹಕ್ಕುಸ್ವಾಮ್ಯ ಹೊಂದಿದೆ. ನಾಡಧ್ವಜವು ರಾಜಕೀಯ ಪಕ್ಷಗಳ ಧ್ವಜಗಳಿಗಿಂತ ಭಿನ್ನವಾಗಿರಬೇಕು. ಬಿಳಿ ಬಣ್ಣ ಬಳಸುವುದರಿಂದ ಲಾಂಛನ ಹಾಕಿಕೊಳ್ಳಲು ಸಹಕಾರಿಯಾಗಿದೆ, ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Scroll to load tweet…