ಕೇಂದ್ರ ಸಚಿವರ ಮನೆಯಲ್ಲೇ ಕಳ್ಳತನ/ ಕೇಂದ್ರ ರೈಲ್ವೆ ಸಚಿವರ ಮನೆಯಿಂದ ಮಹತ್ವದ ದಾಖಲೆ ಕದ್ದ ಮನೆಕೆಲಸದವ/ ದೆಹಲಿ ಪೊಲೀಸರಿಂದ ಆರೋಪಿಯ ತೀವ್ರ ವಿಚಾರಣೆ

ಮುಂಬೈ[ಅ. 03] ಕೇಂದ್ರ ಸಚಿವರ ಮನೆಯಲ್ಲೆ ಕಳ್ಳತನವಾಗಿದೆ. ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯ ಕಂಪ್ಯೂಟರ್ ನಲ್ಲಿದ್ದ ಮಾಹಿತಿ ಹಾಗೂ ಬೆಲೆ ಬಾಳುವ ವಸ್ತುಗಳು ಕಳ್ಳತನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗೋಯಲ್ ಅವರಿಗೆ ಸಂಬಂಧಿಸಿದ ಕಂಪ್ಯೂಟರ್ ನಲ್ಲಿದ್ದ ಮಾಹಿತಿಗಳನ್ನು ಮನೆಕೆಲಸ ಮಾಡುತ್ತಿದ್ದ ವಿಷ್ಣು ಕುಮಾರ್ ಎಂಬಾತ ಕಳ್ಳತನ ಮಾಡಿದ್ದು, ಅಪರಿಚಿತ ವ್ಯಕ್ತಿಗಳಿಗೆ ನೀಡಿದ್ದ ಎಂದು ಹೇಳಲಾಗಿದೆ.

ಆಪರೇಶನ್ ಕಮಲಕ್ಕೆ ಅಸಲಿ ಮಾಸ್ಟರ್ ಮೈಂಡ್ ಅವರೇ!

ದೆಹಲಿಯ ನಿವಾಸಿಯಾಗಿರುವ ಆರೋಪಿ ವಿಷ್ಣು (25) ವಿರುದ್ಧ ಇದೀಗ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಸೆ. 16 ರಿಂದ 18 ರ ನಡುವಿನ ದಿನಾಂಕದಲ್ಲಿ ಕಳ್ಳತನವಾಗಿದೆ. ಮನೆಯಲ್ಲಿದ್ದ ವಸ್ತುಗಳು ನಾಪತ್ತೆಯಾಗಿರುವುದು ಕಂಡು ಬಂದ ನಂತರ ಕಳ್ಳತನದ ಅರಿವಾಗಿದೆ.

ಬೆಳ್ಳಿ ಕಲಾಕೃತಿ, ವಾಚ್, 40 ಸಾವಿರ ಮೌಲ್ಯದ ಬಟ್ಟೆ ಮತ್ತು ಹಾರ್ಡ್ ಡಿಸ್ಕ್ ಮೊದಲಾದವುಗಳನ್ನು ಕಳವು ಮಾಡಿದ್ದ ಈತನನ್ನು ದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದು, ಗುರುವಾರ ಮುಂಬೈಗೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.