ಬೆಂಗಳೂರು(ಸೆ.13): ಕಾವೇರಿ ವಿಚಾರದಲ್ಲಿ ಅನಿವಾರ್ಯ ಸ್ಥಿತಿ ಎದುರಾದರೆ ರಾಜೀನಾಮೆ ಸಲ್ಲಿಸಿ, ವಿಧಾನಸಭೆಯನ್ನು ವಿಸರ್ಜಿಸಿ ಜನರ ಮುಂದೆ ಹೋಗೋಣ ಎಂದು ಹಿರಿಯ ಕಾಂಗ್ರೆಸ್ ಮುಖಂಡರು ಸಿಎಂ ಸಿದ್ಧರಾಮಯ್ಯರಿಗೆ ಸಲಹೆ ನೀಡಿದ್ದಾರೆ. ಹೀಗೆ ಕಾವೇರಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮಿಳುನಾಡಿಗೆ ಕಾವೇರಿ ನೀರು ನಿಲ್ಲಿಸಲು ನಿರ್ಧಾರ ಕೈಗೊಂಡು ಜನಾಕ್ರೋಶದಿಂದ ಪಾರಾಗಾಲು ಸರ್ಕಾರದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈ ವಿಚಾರದಲ್ಲಿ ಇದೇ ಮೊದಲ ಬಾರಿಗೆ ಇಡೀ ಸಚಿವ ಸಂಪುಟದ ಸದಸ್ಯರು ಒಕ್ಕೊರಲ ಬೆಂಬಲ ನೀಡಿದ್ದಾರೆ.

ಕಾವೇರಿನೀರುನಿಲ್ಲಿಸಿದರೆ ಏನಾಗುತ್ತದೆ?

- ನೀರು ಹರಿಸಬೇಕೆಂಬ ಸುಪ್ರೀಂಕೋರ್ಟ್ ಆದೇಶ ಪಾಲಿಸಲೇಬೇಕಾಗಿಲ್ಲ

- ಆದರೆ, ನ್ಯಾಯಾಂಗ ನಿಂದನೆ ಕೇಸ್ ಎದುರಿಸಬೇಕಾಗುತ್ತದೆ.

- ಕಾವೇರಿ ವಿಷಯದಲ್ಲಿ ಮುಂದಿನ ದಿನದಲ್ಲಿ ಕೋರ್ಟ್​ನಲ್ಲಿ ಕರ್ನಾಟಕದ ವಾದ ಬಿದ್ದು ಹೋಗುತ್ತದೆ

- ಏನೇ ಆದರೂ ಸರಿ ಅದನ್ನು ಎದುರಿಸುವ ಧೈರ್ಯ ತೋರಿಸಬೇಕಷ್ಟೇ.

- ರಾಜ್ಯದ ಜನರ ಕಣ್ಣಿನಲ್ಲಿ ಸಿಎಂ ಸಿದ್ದರಾಮಯ್ಯ ‘ಹೀರೋ’ ಆಗುತ್ತಾರೆ.

- ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಕ್ರೋಶ, ಬೆಂಬಲವಾಗಿ ಬದಲಾಗುತ್ತದೆ

- ಪ್ರತಿಪಕ್ಷಗಳು ಅನಿವಾರ್ಯವಾಗಿ ಸರ್ಕಾರದ ಬೆನ್ನಿಗೆ ನಿಲ್ಲುವಂತಾಗುತ್ತದೆ

- ಕಾವೇರಿ ಕೊಳ್ಳದ ಭಾಗದಲ್ಲಿ ಕಾಂಗ್ರೆಸ್ ಮತ್ತೆ ಭರಪೂರ ಬೆಂಬಲ ಪಡೆಯುತ್ತದೆ

ಕಾವೇರಿನೀರುನಿಲ್ಲಿಸದಿದ್ದರೆ ಏನಾಗುತ್ತದೆ?

- ಸಿದ್ದರಾಮಯ್ಯ ಸರ್ಕಾರದ ಕಾನೂನು ಪರಿಪಾಲನೆಗೆ ಸುಪ್ರೀಂ ಕೋರ್ಟ್​ ಶಹಬ್ಬಾಶ್'​ಗಿರಿ ನೀಡುತ್ತದೆ

- ನ್ಯಾಯಾಧೀಕರಣ, ಸುಪ್ರೀಂಕೋರ್ಟ್ ಎದುರು ಕರ್ನಾಟಕದ ವಾದ ಗಟ್ಟಿಯಾಗುತ್ತದೆ

- ರಾಜ್ಯದ ರೈತರ ಬೆಳೆಗಳಿಗೆ, ಬೆಂಗಳೂರು ಜನರಿಗೆ ಕುಡಿಯುವ ನೀರು ಸಿಗದಂತಾಗುತ್ತದೆ

- ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಮತ್ತಷ್ಟು ಹೆಚ್ಚಾಗುತ್ತದೆ

- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣಕ್ಕೆ ಸಿಗದೇ ಹೋಗಬಹುದು