ಅಮಿತ್ ಶಾ ಹಿಂದಿ ಹೇಳಿಕೆ ಬೆನ್ನಲ್ಲೇ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಸಿಎಂ| ಅತ್ತ ಹಿಂದಿ ರಾಷ್ಟ್ರೀಯ ಭಾಷೆಯನ್ನಾಗಿಸಲು ಅಮಿತ್ ಶಾ ಮನವಿ, ಇತ್ತ ಹಿಂದಿ ಪ್ರೀತಿಸದವರು ದೇಶಪ್ರೇಮಿಗಳೇ ಅಲ್ಲ ಎಂದ ಸಿಎಂ| ಏನಿದು ವಿವಾದ? ಹೇಳಿಕೆ ನೀಡಿದ್ದು ಯಾರು? ಇಲ್ಲಿದೆ ವಿವರ

ಅಗರ್ತಲಾ[ಸೆ.17]: ಗೃಹ ಸಚಿವ ಅಮಿತ್ ಶಾ ಹಿಂದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿಸಲು ಮನವಿ ಮಾಡಿದ್ದ ವಿಚಾರ ದೇಶದೆಲ್ಲೆಡೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ವಿವಾದ ತಣ್ಣಗಾಗುವ ಮುನ್ನವೇ ಇದೀಗ ಮತ್ತೊಬ್ಬ ಸಿಎಂ 'ಹಿಂದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿಸಲು ಯಾರು ವಿರೊಧಿಸುತ್ತಾರೋ ಅವರೆಲ್ಲರೂ ದೇಶಪ್ರೇಮಿಗಳಲ್ಲ' ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಿಂದಿ ಹೇರಿಕೆ; ತಮಿಳು ತಂಟೆಗೆ ಬಂದ್ರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡ್ತೀವಿ ಎಂದ ಕಮಲ್ ಹಾಸನ್

ಹೌದು ಅಟಲ್ ಬಿಹಾರಿ ವಾಜಪೇಯಿ ಪ್ರಾದೇಶಿಕ ಕ್ಯಾನ್ಸರ್ ಸೆಂಟರ್ ಉದ್ಘಾಟಿಸಿ ಮಾತನಾಡಿದ ತ್ರಿಪುರಾ ಸಿಎಂ ಬಿಪ್ಲವ್ ಕುಮಾರ್ ದೇವ್ 'ಹಿಂದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿಸಲು ಯಾರೆಲ್ಲಾ ವಿರೋಧ ವ್ಯಕ್ತಪಡಿಸುತ್ತಾರೋ, ಅವರ‍್ಯಾರೂ ದೇಶಪ್ರೇಮಿಗಳಲ್ಲ. ಭಾರತದಲ್ಲಿ ಅತಿಹೆಚ್ಚು ಮಂದಿ ಹಿಂದಿ ಭಾಷೆಯನ್ನು ಬಳಸುತ್ತಾರೆ, ಈ ಕಾರಣದಿಂದ ನಾನು ಇದನ್ನು ರಾಷ್ಟ್ರೀಯ ಭಾಷೆಯನ್ನಾಗಿಸಲು ಬೆಂಬಲಿಸುತ್ತೇನೆ' ಎಂದಿದ್ದಾರೆ.

ಅತ್ತ ದೇಶಕ್ಕೊಂದೇ ಭಾಷೆ ಎಂದ ಶಾ: ಇತ್ತ ಹಿಂದಿ ದಿನ ಆಚರಣೆಗೆ ಸಿದ್ದು ವಿರೋಧ!

ಅಲ್ಲದೇ 'ಹಲವರು ಪ್ರತಿಷ್ಠೆಗಾಗಿ ಆಂಗ್ಲ ಭಾಷೆಯನ್ನು ಬಳಸುತ್ತಾರೆ. ಆದರೆ ಆಂಗ್ಲ ಭಾಷೆ ಬಳಸುವ ದೇಶಗಳು ಮಾತ್ರ ಅಭಿವೃದ್ಧಿ ಕಾಣುತ್ತವೆ ಎಂಬುವುದು ಅತ್ಯಕ್ಕೆ ದೂರವಾದ ಸಂಗತಿ. ಯಾಕೆಂದರೆ ಜರ್ಮನಿ, ಚೀನಾ, ಜಪಾನ್, ರಷ್ಯಾ ಹಾಗೂ ಇಸ್ರೇಲ್ ಇಂದು ಅಭಿವೃದ್ಧಿ ಕಂಡ ರಾಷ್ಟ್ರಗಳಾಗಿ ಗುರುತಿಸಿಕೊಳ್ಳುತ್ತಿವೆ. ಹೀಗಾಗಿ ಸರ್ಕಾರಿ ಅಧಿಕಾರಿಗಳು ಕೂಡಾ ಜನರು ತಮ್ಮ ಬಳಿ ಕೆಲಸಕ್ಕಾಗಿ ಬಂದಾಗ ಇಂಗ್ಲೀಷ್ ಭಾಷೆಗಿಂತ ಹೆಚ್ಚು ಹಿಂದಿ ಅಥವಾ ಸ್ಥಳೀಯ ಭಾಷೆಯನ್ನು ಬಳಸಬೇಕು' ಎಂದು ಮನವಿ ಮಾಡಿಕೊಂಡಿದ್ದಾರೆ.