ಸರತಿ ಸಾಲಿನಲ್ಲಿ ನಿಂತಿದ್ದ ಮೂವರು ಭಕ್ತರ ಸಾವು| ಕಾಂಚಿಪುರಂ ದೇವಸ್ಥಾನದಲ್ಲಿ ಸಂಭವಿಸಿದ ದುರ್ಘಟನೆ| ದೀರ್ಘಕಾಲ ಕ್ಯೂನಲ್ಲಿ ನಿಂತ ಪರಿಣಾಮ ಉಸಿರುಗಟ್ಟಿ ಸಾವು| ಇಬ್ಬರು ಮಹಿಳೆಯರು, ಓರ್ವ ಪುರುಷ ಭಕ್ತರ ಸಾವು| ಕಾಂಚಿಪುರಂನ ವರದರಾಜ ಪೇರುಮಾಳ್ ದೇವಸ್ಥಾನ| 

ಚೆನ್ನೈ(ಜು.18): ಕಾಂಚಿಪುರಂನ ವರದರಾಜ ಪೇರುಮಾಳ್ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಮೂವರು ಭಕ್ತರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೀರ್ಘಕಾಲ ಕ್ಯೂನಲ್ಲಿ ನಿಂತ ಪರಿಣಾಮ ಇಬ್ಬರು ಮಹಿಳೆ ಸೇರಿದಂತೆ ಮೂವರು ಭಕ್ತರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಅಸ್ವಸ್ಥರಾದ ಕೂಡಲೇ ಅವರನ್ನು ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೂವರು ಮೃತಪಟ್ಟಿದ್ದಾರೆ. 

ಮೃತರನ್ನು ಸೇಲಂ ಮೂಲದ ಆನಂದನ್(56), ಆವಡಿ ಮೂಲದ ಜಯಂತಿ(62) ಹಾಗೂ ಆಂಧ್ರ ಪ್ರದೇಶದ ಗುಂಟೂರ್ ಮೂಲದ ನಾರಾಯಣಿ(65) ಎಂದು ಗುರುತಿಸಲಾಗಿದೆ.