ಒಂದೇ ಕುಟುಂಬದ ಮೂವರು ಸದ್ಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ನಡೆದಿದೆ. 

ಅರಕಲಗೂಡು: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡನಾಯಕನಕೊಪ್ಪಲಿನಲ್ಲಿ ಭಾನುವಾರ ರಾತ್ರಿ ನಡೆದಿದೆ. 

Add Asianetnews Kannada as a Preferred SourcegooglePreferred

ತಾಲೂಕಿನ ದೊಡ್ಡನಾಯಕನ ಕೊಪ್ಪಲು ಗ್ರಾಮದ ದಂಪತಿಯಾದ ಕೃಷ್ಣೇಗೌಡ (50) ಮತ್ತು ಮಂಜುಳ (40), ಪುತ್ರಿ ಭೂಮಿಕ (21) ಮೃತ ದುರ್ದೈವಿಗಳು. ತಂದೆ, ತಾಯಿ ಮತ್ತು ಮಗಳು ಮೂವರು ವಿಷ ಕುಡಿಯುವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಈ ಮೂವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ. 

ಪಟ್ಟಣ ಪೊಲೀಸರು ಸ್ಥಳಕ್ಕೆ ತೆರಳಿ ಪರೀಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶೆಹಪುರವಾಡ್‌ ತಿಳಿಸಿದ್ದಾರೆ.