ಮಹದಾಯಿ ವಿವಾದ: ಅಕ್ಟೋಬರ್ 21ಕ್ಕೆ 3 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ
ಬೆಂಗಳೂರು(ಅ.06): ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಅಕ್ಟೋಬರ್ 21ರಂದು ಮುಂಬೈನಲ್ಲಿ ಕರ್ನಾಟಕ, ಗೋವಾ, ಮಹಾರಾಷ್ಟ್ರ ರಾಜ್ಯಗಳ ಸಿಎಂಗಳ ಸಭೆ ಕರೆಯಲಾಗಿದೆ.
ಈ ಬಗ್ಗೆ, ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಸಭೆಯಲ್ಲಿ ಭಾಗವಹಿಸುವಂತೆ ಹೇಳಿದ್ದಾರೆ. ಮಹದಾಯಿ ವಿವಾದ ಬಗೆಹರಿಸುವಂತೆ ನ್ಯಾಯಮಂಡಳಿ ಸೂಚಿಸಿದ್ದ ಹಿ್ನನೆಲೆಯಲ್ಲಿ ಈ ಸಭೆ ಕರೆಯಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು, ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಮಾತುಕತೆ ಮೂಲಕ ವಿವಾದ ಬಗೆಹರಿಸುವಂತೆ ಪ್ರಧಾನಿಗೆ ಪತ್ರ ಬರೆದಿದ್ದೆ. ಪತ್ರ ಬರೆದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸಭೆ ಕರೆದಿದ್ದಾರೆ. ಅಕ್ಟೋಬರ್ 21ರಂದು ನಡೆಯುವ ಸಭೆಯಲ್ಲಿ ನಾನು ಪಾಲ್ಗೊಳ್ಳುವೆ ಎಂದು ಸಿಎಂ ತಿಳಿಸಿದ್ಧಾರೆ.