ಮನೆಗೆ ನುಗ್ಗಿದ ಟಿಪ್ಪರ್ : ಇಬ್ಬರು ಸ್ಥಳದಲ್ಲೇ ಸಾವು
ಟಿಪ್ಪರ್ ಒಂದು ಮನೆಗೆ ನುಗ್ಗಿದ ಪರಿಣಾಮ ಮನೆಯ ಛಾವಣಿ ಕುಸಿದು ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಹೊಸಕೋಟೆಯಲ್ಲಿ ನಡೆದಿದೆ.
ಹೊಸಕೋಟೆ : ಟಿಪ್ಪರ್ ಒಂದು ಮನೆಗೆ ನುಗ್ಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾ ಘಟನೆ ಹೊಸಕೋಟೆ ತಾಲೂಕಿನ ಬೋಧನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ 207ರ ಚಿಕ್ಕತಿರುಪತಿ ಕಡೆಯಿಂದ ಬೆಂಗಳೂರಿಗೆ ಎಮ್ ಸ್ಯಾಂಡ್ ಡಸ್ಟ್ ತುಂಬಿದ್ದ ಟಿಪ್ಪರ್ ಲಾರಿ ಮನೆಗೆ ನುಗ್ಗಿದ ಪರಿಣಾಮ 26 ವರ್ಷದ ರಘು, 45 ವರ್ಷದ ಮಂಜುನಾಥ್ ಮೃತಪಟ್ಟಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿದ್ದ ಮನೆಗೆ ನುಗ್ಗಿದೆ. ಈ ವೇಳೆ ಮನೆಯ ಛಾವಣಿ ಸಂಪೂರ್ಣ ಕುಸಿತವಾಗಿದ್ದು, ಮನೆ ಕುಸಿದ ಪರಿಣಾಮ ಮನೆಯಲ್ಲಿ ಮಲಗಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವಶೇಷಗಳ ಅಡಿ ಸಿಲುಕಿದ್ದ ಮೃತದೇಹಗಳನ್ನು ಕ್ರೇನ್ ಸಹಾಯದಿಂದ ತೆರವು ಕಾರ್ಯಾಚರಣೆ ಮಾಡಲಾಗಿದೆ. ಸ್ಥಳಕ್ಕೆ ತಿರುಮಲ ಶೆಟ್ಟಿಹಳ್ಳಿ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.