ಟಿಪ್ಪು ಜಯಂತಿ: ಪರ-ವಿರುದ್ಧದ ಮೆರವಣಿಗೆ ಇಲ್ಲ, ಅವಹೇಳನಕಾರಿ ಪೋಸ್ಟ್ಗೆ ಕಠಿಣ ಶಿಕ್ಷೆ
ಕಳೆದ ಎರಡು ಮೂರು ವರ್ಷಗಳಲ್ಲಿ ಟಿಪ್ಪು ಜಯಂತಿ ವೇಳೆ ಕೆಲ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಕೆಲವು ಕ್ರಮ ತೆಗೆದುಕೊಳ್ಳಲಾಗಿದೆ.ಏನು ಆ ಕ್ರಮಗಳು? ಇಲ್ಲಿವೆ ನೋಡಿ.
ಬೆಂಗಳೂರು, [ನ.05]: ಎಂದಿನಂತೆ ಈ ಬಾರಿಯೂ ಟಿಪ್ಪು ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಆದರೆ, ಈ ಬಾರಿಯ ಆಚರಣೆಯಲ್ಲಿ ಹಲವು ಬದಲಾವಣೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಟಿಪ್ಪು ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಭದ್ರತೆಗೆ ಸಂಬಂಧಿಸಿದಂತೆ ಇಂದು [ಸೋಮವಾರ] ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಪರಮೇಶ್ವರ್ ಸಭೆ ನಡೆಸಿದರು.
ನ.10ಕ್ಕೆ ಟಿಪ್ಪು ಜಯಂತಿ: ನಿರ್ಧಾರ ಪ್ರಕಟಿಸಿದ ಸರ್ಕಾರ
Government will celebrate #TipuJayanti, but all processions, both for and against have been banned. We have requested 10 companies of RAF from Centre. All officers have been informed: G Parameshwara, Karnataka Deputy Chief Minister pic.twitter.com/SkpS6ruZmB
— ANI (@ANI) November 5, 2018
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್, “ನ.10 ರಂದು ನಡೆಯಲಿರುವ ಟಿಪ್ಪುಜಯಂತಿ ಆಚರಣೆಯನ್ನು ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆ ದೃಷ್ಟಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದ ಬದಲು ರವೀಂದ್ರ ಕಲಾಕ್ಷೇತ್ರದಲ್ಲಿ ಮಧ್ಯಾಹ್ನ 2 ಗಂಟೆ ಒಳಗೆ ಆಚರಿಸಲಾಗುವುದು.
ರಾಜ್ಯ ಸರಕಾರ ಕಳೆದ ಮೂರು ವರ್ಷದಿಂದ ಟಿಪ್ಪು ಜಯಂತಿ ಆಚರಿಸುತ್ತಾ ಬರುತ್ತಿದೆ. ಕೆಲವರು ಈ ಜಯಂತಿಗೆ ಭಂಗ ತರುವ ಹೇಳಿಕೆ ನೀಡುತ್ತಿರುವುದರಿಂದ ಇಷ್ಟೆಲ್ಲ ತೊಂದರೆಯಾಗುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಕಳೆದ ಎರಡು ಮೂರು ವರ್ಷಗಳಲ್ಲಿ ಟಿಪ್ಪು ಜಯಂತಿ ವೇಳೆ ಕೆಲ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಕೆಲವು ಕ್ರಮ ತೆಗೆದುಕೊಳ್ಳಲಾಗಿದೆ.
1. ಯಾವುದೇ ರೀತಿಯ ಮೆರವಣಿಗೆಗೆ ಅವಕಾಶ ಇಲ್ಲ.
2 ಸಭಾಂಗಣದಲ್ಲೇ (indoor) ಕಾರ್ಯಕ್ರಮ ನಡೆಯಬೇಕು.
3 ಕಾರ್ಯಕ್ರಮ ನಡೆಯುವ ಸ್ಥಳ ಹೊರತುಪಡಿಸಿ ಎಲ್ಲೂ ಬ್ಯಾನರ್ ಹಾಕುವಂತಿಲ್ಲ.
4 ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟಿಂಗ್ ಮಾಡುವಂತಿಲ್ಲ ಮಾಡಿದಲ್ಲಿ ಕಠಿಣ ಕ್ರಮ.
5. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ.