ತಿರುಪತಿಯ ತಿರುಮಲ ದೇವಾಲಯದಲ್ಲಿ ಪ್ರಸಾದ ರೂಪದಲ್ಲಿ ತಯಾರಿಸುವ ಲಡ್ಡುಗೆ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಪರವಾನಗಿ ನೀಡಲಾಗಿದೆ.

ಬೆಂಗಳೂರು (ಸೆ.20): ತಿರುಪತಿಯ ತಿರುಮಲ ದೇವಾಲಯದಲ್ಲಿ ಪ್ರಸಾದ ರೂಪದಲ್ಲಿ ತಯಾರಿಸುವ ಲಡ್ಡುಗೆ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಪರವಾನಗಿ ನೀಡಲಾಗಿದೆ.

Add Asianetnews Kannada as a Preferred SourcegooglePreferred

ಲಡ್ಡು ತಯಾರಿಕೆಯಲ್ಲಿ ಶುಚಿತ್ವದ ಕೊರತೆ, ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದ ಬಗ್ಗೆ ಮಾತು ದೂರು ಕೇಳಿ ಬಂದ ಹಿನ್ನೆಲೆ, ಟಿಟಿಡಿ ಟ್ರಸ್ಟ್‌ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯನ್ನ ಸಂಪರ್ಕಿಸಿ, ಲಡ್ಡು ತಯಾರಿಕೆ ಬಗ್ಗೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಆಹಾರ ಗುಣಮಟ್ಟ ಪ್ರಾಧಿಕಾರದ ಚೆನ್ನೈನ ಕೇಂದ್ರೀಯ ಪರವಾನಗಿ ಘಟಕವು, ಟಿಟಿಡಿ ಟ್ರಸ್ಟ್‌ಗೆ ಈ ವರ್ಷದ ಆಗಸ್ಟ್‌ ತಿಂಗಳಿನಲ್ಲಿ ಪರವಾನಗಿ ನೀಡಿದೆ. ಇದಕ್ಕಾಗಿ ಟಿಟಿಡಿ 7,500 ರೂ. ಪರವಾನಗಿ ಶುಲ್ಕ ಪಾವತಿಸಿದೆ.