ರಾಷ್ಟ್ರೀಯ ಪಕ್ಷದ ಮಾನ್ಯತೆ ಕಳೆದುಕೊಳ್ಳುವ ಭೀತಿಯಲ್ಲಿ ಮೂರು ಪಕ್ಷಗಳು| ಟಿಎಂಸಿ, ಸಿಪಿಐ, ಎನ್’ಸಿಪಿ ರಾಷ್ಟ್ರೀಯ ಪಕ್ಷದ ಮಾನ್ಯತೆ ರದ್ದು ಸಂಭವ| ಮೂರೂ ಪಕ್ಷಗಳಿಗೂ ನೊಟೀಸ್ ಜಾರಿ ಮಾಡಿರುವ ಚುನಾವಣಾ ಆಯೋಗ| ಆ.15ರೊಳಗಾಗಿ ನೊಟೀಸ್’ಗೆ ಉತ್ತರಿಸುವಂತೆ ಚುನಾವಣಾ ಆಯೋಗ ಸೂಚನೆ| ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಹಿನ್ನೆಲೆ ನೊಟೀಸ್|

ನವದೆಹಲಿ(ಜು.19): ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ, ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್(ಟಿಎಂಸಿ), ಶರದ್ ಪವಾರ್ ನೇತೃತ್ವದ ನ್ಯಾಶಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್’ಸಿಪಿ) ಹಾಗೂ ಭಾರತೀಯ ಕಮ್ಯೂನಿಸ್ಟ್ ಪಕ್ಷ(ಸಿಪಿಐ)ಗಳು ರಾಷ್ಟ್ರೀಯ ಪಕ್ಷದ ಮಾನ್ಯತೆ ಕಳೆದುಕೊಳ್ಳುವ ಭೀತಿಯಲ್ಲಿವೆ.

Add Asianetnews Kannada as a Preferred SourcegooglePreferred

ಈ ಕುರಿತು ಮೂರೂ ಪಕ್ಷಗಳಿಗೂ ನೊಟೀಸ್ ಜಾರಿ ಮಾಡಿರುವ ಚುನಾವಣಾ ಆಯೋಗ, ಇದೇ ಆ.15ರೊಳಗಾಗಿ ರಾಷ್ಟ್ರೀಯ ಪಕ್ಷದ ಮಾನ್ಯತೆ ಏಕೆ ರದ್ದುಗೊಳಿಸಬಾರದು ಎಂಬ ಪ್ರಶ್ನೆಗೆ ಉತ್ತರಿಸುವಂತೆ ಆದೇಶಿಸಿದೆ.

ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎನ್’ಸಿಪಿ 5 ಸೀಟುಗಳನ್ನು ಪಡೆದಿದ್ದರೆ, ಟಿಎಂಸಿ 18 ಸೀಟುಗಳನ್ನು ಗಳಿಸಿದೆ. ಅದರಂತೆ ಸಿಪಿಐ ಒಂದೇ ಒಂದು ಸ್ಥಾನ ಗಳಿಸಿಲ್ಲ. ಮೂರೂ ಪಕ್ಷಗಳ ಪೈಕಿ ಟಿಎಂಸಿ ಪ.ಬಂಗಾಳದಲ್ಲಿ ಅಧಿಕಾರದಲ್ಲಿದ್ದರೆ, ಎನ್’ಸಿಪಿ ಮಹಾರಾಷ್ಟ್ರ ವಿಧಾನಸಭೆಯಲ್ಲೂ ಅಷ್ಟೊಂದು ಸಂಖ್ಯಾಬಲ ಹೊಂದಿಲ್ಲ.

ಈ ಹಿನ್ನೆಲೆಯಲ್ಲಿ ಈ ಮೂರು ಪಕ್ಷಗಳು ರಾಷ್ಟ್ರೀಯ ಪಕ್ಷದ ಮಾನ್ಯತೆ ಕಳೆದುಕೊಳ್ಳುವ ಸಂಭವನೀಯತೆ ಹೆಚ್ಚು ಎನ್ನಲಾಗಿದೆ.