ರಾಜ್ಯಪಾಲ ಕೆ.ಎನ್ ತ್ರಿಪಾಠಿ ಮುಖ್ಯಮಮತ್ರಿ ಮಮತಾ ಬ್ಯಾನರ್ಜಿಯನ್ನು ನಿಂದಿಸಿ ಬೆದರಿಕೆ ಹಾಕಿರುವುದನ್ನು ಟಿಎಂಸಿ ತೀವ್ರವಾಗಿ ಖಂಡಿಸಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್’ಗೆ ಪತ್ರ ಬರೆದಿದ್ದಾರೆ. ಈ ವಿಚಾರವನ್ನು ಪರಿಗಣಿಸಬೇಕೆಂದು ಕೇಳಿಕೊಂಡಿದ್ದಾರೆ.

ಕೋಲ್ಕತ್ತಾ (ಜು.05): ರಾಜ್ಯಪಾಲ ಕೆ.ಎನ್ ತ್ರಿಪಾಠಿ ಮುಖ್ಯಮಮತ್ರಿ ಮಮತಾ ಬ್ಯಾನರ್ಜಿಯನ್ನು ನಿಂದಿಸಿ ಬೆದರಿಕೆ ಹಾಕಿರುವುದನ್ನು ಟಿಎಂಸಿ ತೀವ್ರವಾಗಿ ಖಂಡಿಸಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್’ಗೆ ಪತ್ರ ಬರೆದಿದ್ದಾರೆ. ಈ ವಿಚಾರವನ್ನು ಪರಿಗಣಿಸಬೇಕೆಂದು ಕೇಳಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯಪಾಲ ಕೆ.ಎನ್ ತ್ರಿಪಾಠಿ ಸಾಂವಿಧಾನಿಕ ಮಿತಿಯನ್ನು ದಾಟಿ ನಮ್ಮ ಮುಖ್ಯಮಂತ್ರಿ ಜೊತೆ ಅನುಚಿತವಾಗಿ ವರ್ತಿಸಿದ್ದು ದುರಾದೃಷ್ಟ. ನಾವು ಇದನ್ನು ಸಹಿಸುವುದಿಲ್ಲ. ಇದರ ಬಗ್ಗೆ ಕೇಂದ್ರ ಗೃಹ ಸಚಿವರಿಂದ ಸಮಜಾಯಿಷಿ ಕೇಳಲು ಬಯಸುತ್ತೇವೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ರಾಷ್ಟ್ರಪತಿಯವರಿಗೆ ಕೇಳಿಕೊಂಡಿದ್ದೇವೆ. ತ್ರಿಪಾಠಿಯವರನ್ನು ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಸಬೇಕೆಂದು ಟಿಎಂಸಿ ಒತ್ತಾಯಿಸಿದೆ.

ಬಂಡೂರಿಯಾ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ 48 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಸಶಸ್ತ್ರ ಪಡೆಯನ್ನು ಆಯೋಜಿಸಲಾಗಿದೆ. ಇಂಟರ್’ನೆಟ್ ಸೌಲಭ್ಯವನ್ನು ಕಡಿತಗೊಳಿಸಲಾಗಿದೆ. ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.