ಇಂದು ಮಂಡನೆಯಾಗುವ ಸಿದ್ದು ಬಜೆಟ್’ನಲ್ಲಿ ಚುನಾವಣಾ ದೃಷ್ಟಿಯಿಂದ ಬಂಫರ್ ಗಿಫ್ಟ್..?
ಇಂದು ಸಿಎಂ ಸಿದ್ದರಾಮಯ್ಯ ಸರ್ಕಾರ ತಮ್ಮ ಅವಧಿಯ ಅಂತಿಮ ಬಜೆಟ್ ಮಂಡಿಸಲಿದೆ. ಸಿದ್ದು ಸೂಟ್ಕೇಸ್ನಲ್ಲಿ ಚುನಾವಣಾ ದೃಷ್ಟಿಯಿಂದ ಬಂಪರ್ ಗಿಫ್ಟ್ಗಳು ಸಿಗಲಿವೆ ಎನ್ನಲಾಗುತ್ತಿದೆ. ಇದೊಂದು ಎಲೆಕ್ಷನ್ ಬಜೆಟ್ ಅಂತಾನೇ ಬಣ್ಣಿಸಲಾಗುತ್ತಿದೆ.
ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಸರ್ಕಾರ ತಮ್ಮ ಅವಧಿಯ ಅಂತಿಮ ಬಜೆಟ್ ಮಂಡಿಸಲಿದೆ. ಸಿದ್ದು ಸೂಟ್ಕೇಸ್ನಲ್ಲಿ ಚುನಾವಣಾ ದೃಷ್ಟಿಯಿಂದ ಬಂಪರ್ ಗಿಫ್ಟ್ಗಳು ಸಿಗಲಿವೆ ಎನ್ನಲಾಗುತ್ತಿದೆ. ಇದೊಂದು ಎಲೆಕ್ಷನ್ ಬಜೆಟ್ ಅಂತಾನೇ ಬಣ್ಣಿಸಲಾಗುತ್ತಿದೆ.
ಚುನಾವಣಾ ವರ್ಷವಾಗಿರೋದ್ರಿಂದ ಈ ಬಾರಿ ಸಿದ್ಧರಾಮಯ್ಯ ಬಜೆಟ್ ಸಹಜವಾಗಿಯೇ ಜನಪ್ರಿಯ ಘೋಷಣೆಗಳ ಪುಸ್ತಕ ಅನ್ನೋದರಲ್ಲಿ ಅನುಮಾನವಿಲ್ಲ. ರೈತರು ಮತ್ತು ಮತದಾರ ವರ್ಗವನ್ನೇ ಗುರಿಯಾಗಿಸಿಕೊಂಡು ಸಿದ್ದರಾಮಯ್ಯ ಭರವಸೆಗಳ ಮಹಾಪೂರವನ್ನೇ ಹರಿಸಲಿದ್ದಾರೆ. ಸಿದ್ದರಾಮಯ್ಯ ಈ ಬಾರಿ ಬಜೆಟ್ ಹಲವು ವಿಶೇಷತೆಗಳನ್ನ ಹೊಂದಿವೆ.
ರೈತರಿಗೆ ಹಾಗೂ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್ ಕೊಡಲು ಸರ್ಕಾರ ಮುಂದಾಗಿದೆ ಎಂದು ಕೂಡ ಹೇಳಲಾಗ್ತಿದೆ. ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಇನ್ನೂ ಈ ನಿಟ್ಟಿನಲ್ಲಿ ಅನೇಕ ಜನಪ್ರಿಯ ಘೋಷಣೆಗಳನ್ನು ಹೊರಡಿಸುವ ಸಾಧ್ಯತೆಗಳಿವೆ.