ಅಯ್ಯಪ್ಪ ದರ್ಶನ ಪಡೆಯಲು ತೆರಳುತ್ತಿದ್ದ ವೇಳೆ ತಡೆಯಲಾಗಿದ್ದ 4 ಹಿಜಡಾಗಳಿಗೆ ಕೊನೆಗೂ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ತಿರುವನಂತಪುರ[ಡಿ.18]: ಭಾನುವಾರ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆಂದು ತೆರಳುತ್ತಿದ್ದ ವೇಳೆ ಪೊಲೀಸರಿಂದ ತಡೆಯಲ್ಪಟ್ಟಿದ್ದ ನಾಲ್ವರು ಹಿಜಡಾಗಳಿಗೆ, ಕೊನೆಗೂ ದೇವರ ದರ್ಶನಕ್ಕೆ ಅನುಮತಿ ನೀಡಲಾಗಿದೆ.

Add Asianetnews Kannada as a Preferred SourcegooglePreferred

ನಾಲ್ವರು ಮಂಗಳಮುಖಿಯರು ಸೋಮವಾರ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಭೇಟಿ ಮಾಡಿದ ಬಳಿಕ ಅವರಿಗೆ ಸೂಕ್ತ ಸಮಯದಲ್ಲಿ ತೆರಳಲು ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ.

ಶಬರಿಮಲೆ ಪ್ರವೇಶಕ್ಕೆ ತೃತೀಯ ಲಿಂಗಿಗಳಿಗೆ ವಿರೋಧ

ಈ ಹಿಂದೆಯೂ ಹಿಜಡಾಗಳು ದೇಗುಲಕ್ಕೆ ತೆರಳಿದ್ದಾರೆ. ಅವರಿಗೆ ಯಾವುದೇ ಅಡ್ಡಿ ಇಲ್ಲ. ಹೀಗಾಗಿ ಅವರಿಗೆ ಅವಕಾಶ ಮಾಡಿಕೊಡಲಾಗುವುದು. ಈ ನಾಲ್ವರನ್ನು ಪೊಲೀಸರು ಮಹಿಳೆಯರೆಂದು ತಪ್ಪಾಗಿ ಭಾವಿಸಿ ಅವರಿಗೆ ಅನುಮತಿ ನಿರಾಕರಿಸಿದ್ದರು ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.