ತುಮಕೂರಿನ ಹೇಮಾವತಿ ನೀರಿನ ಹೋರಾಟಕ್ಕೆ ಮೊದಲ ಬಲಿಯಾಗಿದೆ. ಗುಬ್ಬಿ ತಾಲೂಕಿನ ಸೋಮಲಾಪುರದಲ್ಲಿ ರೈತನೊಬ್ಬ ನಾಲೆಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತುಮಕೂರು(ಆ.31): ತುಮಕೂರಿನ ಹೇಮಾವತಿ ನೀರಿನ ಹೋರಾಟಕ್ಕೆ ಮೊದಲ ಬಲಿಯಾಗಿದೆ. ಗುಬ್ಬಿ ತಾಲೂಕಿನ ಸೋಮಲಾಪುರದಲ್ಲಿ ರೈತನೊಬ್ಬ ನಾಲೆಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಲುವರಾಜು (35) ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರೈತ. ಈ ರೈತ ತೂಬು ಮುಚ್ಚುವುದನ್ನು ವಿರೋಧಿಸಿ ನಾಲೆಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಲೆಗೆ ಹಾರಿದಾಗ ನೀರಿನ ಸೆಳೆತಕ್ಕೆ ಸಿಕ್ಕು ಈ ರೈತ ಕೊಚ್ಚಿಹೋಗಿದ್ದಾನೆ.

ಸೋಮಲಾಪುರಕ್ಕೆ ನೀರು ನಿಲ್ಲಿಸಿ, ಕುಣಿಗಲ್​​ಗೆ ನೀರು ಬಿಡುವಂತೆ ತುಮಕೂರು ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಪೊಲೀಸರು ಡಿಸಿಯ ಆದೇಶವನ್ನು ಪಾಲಿಸಲು ಮುಂದಾಗಿದ್ದರು. ಆದರೆ ನಾಲೆ ಬಳಿ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ಸ್ಥಳೀಯ ರೈತರಿಂದ ಪ್ರತಿಭಟನೆಯೂ ನಡೆದಿತ್ತು. ಇವೆಲ್ಲದರಿಂದ ಬೇಸತ್ತ ರೈತ ನಾಲೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.