ಸಿದ್ದರಾಮಯ್ಯ-ಬಿಜೆಪಿ ನಡುವೆ ಟ್ವಿಟರ್ ದಂಗಲ್
ಆರೋಪ-ಪ್ರತ್ಯಾರೋಪಗಳ ಮಧ್ಯೆ ಸೈಲೆಂಟ್ ಆಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಬಿಜೆಪಿ ನಡುವೆ ಟ್ವಿಟರ್ ವಾರ್ ನಡೆದಿದೆ. ಟ್ವಿಟರ್ ನಲ್ಲಿ ಏನೆಲ್ಲಾ ವಾದ -ವಿವಾದಗಳು ನಡೆದಿವೆ ಎನ್ನುವುದನ್ನು ನೋಡಿ.
ಒಂದೆಡೆ ಸಿಎಂ ಕುಮಾರಸ್ವಾಮಿ ಹಾಗೂ ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಗಳ ದಂಗಲ್ ಶುರುವಾಗಿದ್ರೆ, ಮತ್ತೊಂದೆಡೆ ಸೈಲೆಂಟ್ ಆಗಿ ಮಾಜಿ ಮಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಬಿಜೆಪಿ ನಡುವೆ ಟ್ವಿಟರ್ ವಾರ್ ನಡೆದಿದೆ. ಸಿದ್ದಾಂತ ಮಾತನಾಡುವ ಬಿಜೆಪಿಯವರು ಅಧಿಕಾರಕ್ಕಾಗಿ ಕೆಳ ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ ಎಂಬ ಸಿದ್ದು ಟ್ವಿಟ್ಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.