Asianet Suvarna News Asianet Suvarna News

ಕಣಿವೆಯ ಈ ಶೈತಾನ ಮಟಾಷ್: ಸೈನಿಕರೇ ಭೇಷ್ ಭೇಷ್!

ಐಇಡಿ ಸ್ಫೋಟಕ ನಿಪುಣನ ಎನ್​ಕೌಂಟರ್| ಜೀನತ್​ ಉಲ್​ ಇಸ್ಲಾಂ ಎಂಬ ಉಗ್ರನನ್ನು ಹೊಡೆದುರುಳಿಸಿದ ಸೇನೆ| ಸುಧಾರಿತ ಸ್ಫೋಟಕ ಸಾಧನ ತಯಾರಿಸುವಲ್ಲಿ ನಿಪುಣ| ಎನ್​ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ| ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯ ಕತಾಪುರ ಪ್ರದೇಶದಲ್ಲಿ ಎನ್‌ಕೌಂಟರ್

Two Terrorists Killed In Encounter In Jammu and Kashmir
Author
Bengaluru, First Published Jan 13, 2019, 11:58 AM IST

ಶ್ರೀನಗರ(ಜ.13): ಸುಧಾರಿತ ಸ್ಫೋಟಕ ಸಾಧನ (ಐಇಡಿ) ತಯಾರಿಸುವುದರಲ್ಲಿ ನಿಪುಣನಾಗಿದ್ದ ಉಗ್ರ ಸೇರಿದಂತೆ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯ ಕತಾಪುರ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಜೀನತ್​ ಉಲ್​ ಇಸ್ಲಾಂ ಮತ್ತು ಮತ್ತೋರ್ವ ಉಗ್ರನನ್ನು ಹೊಡೆದುರುಳಲಾಗಿದೆ. 

ಈತ ಈ ಮೊದಲು ಹಿಜ್ಬುಲ್​ ಮುಜಾಹಿದೀನ್​ ಉಗ್ರ ಸಂಘಟನೆಯಲ್ಲಿದ್ದ. ಪ್ರಸ್ತುತ ಆತ ಅಲ್​ ಬದರ್​ ಎಂಬ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದು, ಮೋಸ್ಟ್​ ವಾಂಟೆಡ್​ ಉಗ್ರನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕತಾಪುರ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿಯ ಮೇರೆಗೆ ಶನಿವಾರ ಸಂಜೆ ಶೋಧ ಕಾರ್ಯ ಆರಂಭಿಸಲಾಗಿತ್ತು. ಈ ಸಂದರ್ಭದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಗಿತ್ತು. ಎನ್​ಕೌಂಟರ್​ ನಡೆದ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

Follow Us:
Download App:
  • android
  • ios