ಆನಂದನಗರದ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಸ್ಟಂಟ್ ಮಾಡಲು ಹೋದಾಗ ಆಯತಪ್ಪಿ ಬೈಕ್ ಕಂಬಕ್ಕೆ ಡಿಕ್ಕಿಹೊಡೆದ ರಭಸಕ್ಕೆ, ಸವಾರರ ತಲೆ ಕಂಬಕ್ಕೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ.

ಹುಬ್ಬಳ್ಳಿ(ನ.07): ಬೈಕ್ ಸ್ಟಂಟ್ ಮಾಡಲು ಹೋಗಿ ಆಯತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಆನಂದ್ ನಗರದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಮೃತರನ್ನು ೧೭ ವರ್ಷದ ಇಮ್ರಾನ್ ಮಕಾಂದಾರ್, ಕಲೀಮ್ ಶೇಖ್ ಎಂದು ಗುರುತಿಸಲಾಗಿದೆ. ಆನಂದನಗರದ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಸ್ಟಂಟ್ ಮಾಡಲು ಹೋದಾಗ ಆಯತಪ್ಪಿ ಬೈಕ್ ಕಂಬಕ್ಕೆ ಡಿಕ್ಕಿಹೊಡೆದ ರಭಸಕ್ಕೆ, ಸವಾರರ ತಲೆ ಕಂಬಕ್ಕೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪೋಲೀಸರು ಭೇಟಿ ನೀಡಿ, ಮೃತದೇಹಗಳನ್ನ ಹುಬ್ಬಳ್ಳಿಯ ಕಿಮ್ಸ್ ಶವಗಾರಕ್ಕೆ ಸಾಗಿಸಿದ್ದು, ಮೃತರ ಕುಟುಂಬದವರ ಅಕ್ರಂದನ ಮುಗಿಲುಮುಟ್ಟಿದೆ.