33 ವರ್ಷದ ರಾಜು ಎಂಬಾತ ಅಪಘಾತವೊಂದರಲ್ಲಿ ತಲೆಗೆ ಗಾಯಗೊಂಡು ಹೈದ್ರಾಬಾದ್​​​ನ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ರಾಜು ಪತ್ನಿ ಈ ಮೊದಲು 100ರಿಂದ 200 ರೂಪಾಯಿ ನೀಡಿ ತಮ್ಮ ಗಂಡನನ್ನು ವ್ಹೀಲ್‌ ಚೇರ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು.

ವ್ಹೀಲ್‌ ಚೇರ್‌ಗಾಗಿ ರೋಗಿಯ ಕುಟುಂಬದವರು ಹಣ ನೀಡದ ಕಾರಣಕ್ಕಾಗಿ ಆತನ ಮಗುವಿನ ತ್ರಿಚಕ್ರ ಸೈಕಲನ್ನು ಬಳಸುವಂತೆ ಮಾಡಿದ ಆಘಾತಕಾರಿ ಘಟನೆ ಹೈದ್ರಾಬಾದ್​​​ನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

33 ವರ್ಷದ ರಾಜು ಎಂಬಾತ ಅಪಘಾತವೊಂದರಲ್ಲಿ ತಲೆಗೆ ಗಾಯಗೊಂಡು ಹೈದ್ರಾಬಾದ್​​​ನ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ರಾಜು ಪತ್ನಿ ಈ ಮೊದಲು 100ರಿಂದ 200 ರೂಪಾಯಿ ನೀಡಿ ತಮ್ಮ ಗಂಡನನ್ನು ವ್ಹೀಲ್‌ ಚೇರ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಆದರೆ ನಿನ್ನೆ ಅವರಿಗೆ ನೀಡುವಷ್ಟು ಹಣ ತಮ್ಮ ಬಳಿ ಇರಲಿಲ್ಲ. ಹೀಗಾಗಿ ತಮ್ಮ ಮಗುವಿನ ತ್ರಿಚಕ್ರ ಸೈಕಲನ್ನು ಬಳಸಿದ್ದಾರೆ. ಗಾಯಾಳುವಿನ ಪತ್ನಿ ಹೇಳುವ ಪ್ರಕಾರ ನಾವು ಐದಾರು ಬಾರಿ ವ್ಹೀಲ್‌ ಚೇರ್‌ಗಾಗಿ ತಲಾ 100 ರೂ. ಪಾವತಿಸಿದ್ದೇವೆ. ಹಣ ಹೊಂದಿಸುವವರೆಗೆ ನಮ್ಮ ಮೊಬೈಲ್ ಫೋನ್ ಗಳನ್ನು ಅವರ ಬಳಿ ಇಡುವಂತೆ ಹೇಳಿದ್ದರು ಎಂದು ಇಲ್ಲಿನ ಕರಾಳಮುಖವನ್ನು ಬಿಚ್ಚಿಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಆಸ್ಪತ್ರೆ ವೈದ್ಯಾಧಿಕಾರಿ ಘಟನೆಗೆ ಸಂಬಂಧಿಸಿದಂತೆ ನನ್ನ ಬಳಿ ಯಾವುದೇ ಲಿಖಿತ ದೂರು ಬಂದಿಲ್ಲ ಎಂದಿದ್ದಾರೆ.