'ಮುಂದಿನ ಆರು ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪೂರ್ಣ ಶಾಂತಿ'| ರಾಷ್ಟ್ರಪತಿ ಆಡಳಿತ ಮುಂದುವರಿಸುವ ಪ್ರಸ್ತಾವನೆ ಇಟ್ಟ ಅಮಿತ್ ಶಾ| ಕಣಿವೆಯ ಪರಿಸ್ಥಿತಿ ಕುರಿತು ಲೋಕಸಭೆಗೆ ಮಾಹಿತಿ ನೀಡಿದ ಕೇಂದ್ರ ಗೃಹ ಸಚಿವ| ರಾಷ್ಟ್ರಪತಿ ಆಡಳಿತವನ್ನು ವಿಸ್ತರಿಸುವಂತೆ ಲೋಕಸಭೆಯಲ್ಲಿ ಶಾಸನಬದ್ಧ ನಿರ್ಣಯ| ಈ ವರ್ಷದ ಅಂತ್ಯದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ಎಂದ ಶಾ|

ನವದೆಹಲಿ(ಜೂ.28): ಮುಂದಿನ ಆರು ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪೂರ್ಣ ಶಾಂತಿ ನೆಲೆಸಲಿದ್ದು, ಅಲ್ಲಿಯವರೆಗೂ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಮುಂದುವರಿಸುವ ಇರಾದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವ್ಯಕ್ತಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಲೋಕಸಭೆಯಲ್ಲಿ ಇಂದು ಮಾತನಾಡಿದ ಅಮಿತ್ ಶಾ, ಜುಲೈ 3ರಿಂದ ಮತ್ತೆ ಆರು ತಿಂಗಳವರೆಗೆ ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಸ್ತರಿಸುವಂತೆ ಶಾಸನಬದ್ಧ ನಿರ್ಣಯ ಮಂಡಿಸಿದರು.

Scroll to load tweet…

ಕಣಿವೆ ಶಾಂತವಾಗಲು ಏನಿಲ್ಲವೆಂದರೂ 6 ತಿಂಗಳ ಸಮಯ ಬೇಕು. ಈ ಹಿನ್ನೆಲೆಯಲ್ಲಿ ಸದ್ಯ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಲೋಕಸಭೆಗೆ ಸ್ಪಷ್ಟಪಡಿಸಿದರು.

ಚುನಾವಣಾ ಆಯೋಗ ಈ ವರ್ಷದ ಕೊನೆಯಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸಲು ತೀರ್ಮಾನಿಸಿದ್ದು, ಅಷ್ಟರಲ್ಲಿ ಶಾಂತಿಯುತ ಅಮರನಾಥ್ ಯಾತ್ರೆಗೆ ಸರ್ಕಾರ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಿದೆ ಎಂದು ಅಮಿತ್ ಶಾ ತಿಳಿಸಿದರು.