Asianet Suvarna News Asianet Suvarna News

ಕೇಂದ್ರ ಸಚಿವ ಅನಂತ್ ಕುಮಾರ್ ಕ್ಷೇಮ: ಅಧಿಕಾರಿಗಳ ಸ್ಪಷ್ಟನೆ

 ಕೇಂದ್ರ ಸಚಿವ ಅನಂತ್ ಕುಮಾರ್ ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿಗೆ ಅವರ ಕಚೇರಿ ಸ್ಪಷ್ಟನೆ ನೀಡಿದೆ.

Union minister Ananth Kumar health Fine, don't believe roomers official said
Author
Bengaluru, First Published Oct 20, 2018, 10:39 PM IST

ಬೆಂಗಳೂರು, [ಅ.20]: ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರ ಖಾತೆ  ಸಚಿವ ಅನಂತಕುಮಾರ್​ ಅವರು ನಿಧನರಾಗಿದ್ದಾರೆ ಎಂಬ ಗುಮಾನಿಗೆ ಅವರ ಕಚೇರಿಯಿಂದ ಸ್ಪಷ್ಟನೆ ಸಿಕ್ಕಿದೆ.

ಅನಂತಕುಮಾರ್​ ಅವರು ಆರೋಗ್ಯವಾಗಿದ್ದಾರೆ. ಅನಂತಕುಮಾರ್​​ ಅವರು ವಿದೇಶದಲ್ಲಿ ಚಿಕಿತ್ಸೆ ಪಡೆದುಕೊಂಡು ಬೆಂಗಳೂರಿಗೆ ಬಂದಿದ್ದು, ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ.ಹಬ್ಬಿರುವ ಸುಳ್ಳು ಸುದ್ದಿಯನ್ನು ನಂಬಬೇಡಿ ಎಂದು ಸ್ಪಷ್ಟಪಡಿಸಿದೆ.

15 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ಅನಂತಕುಮಾರ್​ ಅವರ ಕಚೇರಿಯಿಂದ ತಿಳಿದುಬಂದಿದೆ. 

Follow Us:
Download App:
  • android
  • ios