ಕೇಂದ್ರ ಸಚಿವನನ್ನು ಎಳೆದಾಡಿ, ಕಪಾಳಕ್ಕೆ ಹೊಡೆದ ಯುವಕ
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರನ್ನು ಯುವಕನೊಬ್ಬ ಎಳೆದಾಡಿ, ಕಪಾಳಕ್ಕೆ ಹೊಡೆದು ರದ್ದಾಂತ ಮಾಡಿದ್ದಾನೆ.
ಥಾಣೆ,[ಡಿ.09]: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅತವಾಲೆ ಅವರನ್ನು ಎಳೆದಾಡಿ ಹಲ್ಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಅಂಬೇರ್ನಾಥ್ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಮದಾಸ್ ಅತವಾಲೆ ಅವರು ಭಾಷಣ ಮುಗಿಸಿ ವೇದಿಕೆಯಿಂದ ಕೆಳಗಿಳಿಯುತ್ತಲೇ ಅವರತ್ತ ನುಗ್ಗಿ ಬಂದ ಪ್ರವೀಣ್ ಗೋಸಾವಿ ಎಂಬ ಯುವಕ, ಸಚಿವರನ್ನ ಕೆಳಗೆ ತಳ್ಳಿ, ಬಳಿಕ ಎಳೆದಾಡಿ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
#WATCH Maha: People thrash Pravin Gosavi, a worker of the youth wing of Republican Party of India, who slapped Union Minister & party leader Ramdas Athawale at an event in Thane y'day. Gosavi has been admitted to a hospital. FIR registered against him, investigation on. (08.12) pic.twitter.com/zvYmNaV8Wi
— ANI (@ANI) December 9, 2018
ಸಚಿವರ ಮೇಲೆ ಹಲ್ಲೆ ನಡೆಯುತ್ತಲೇ ಅವರ ನೆರವಿಗೆ ಧಾವಿಸಿದ ಅವರ ಬೆಂಬಲಿಗರು ಮತ್ತು ಅಂಗರಕ್ಷಕರು, ಯುವಕ ಪ್ರವೀಣ್ನನ್ನು ಪಕ್ಕಕ್ಕೆ ಎಳೆದು ಬೀಳಿಸಿ, ಹೊಡೆದಿದ್ದಾರೆ.
ಆ ನಂತರ ಸಚಿವರ ಬೆಂಬಲಿಗರು ವ್ಯಕ್ತಿಯನ್ನು ಹಿಡಿದು ಥಳಿಸಿದ್ದಾರೆ. ಸಚಿವರ ಮೇಲೆ ಹಲ್ಲೆ ನಡೆಸಿದ ಯುವಕ ಪ್ರವೀಣ್ ಅವರದ್ದೇ ಪಕ್ಷವಾದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ (ಆರ್ಪಿಐ) ಕಾರ್ಯಕರ್ತ ಎನ್ನಲಾಗಿದ್ದು, ಪ್ರವೀಣ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.