‘ದೀಪಾವಳಿ ಬಳಿಕ ರಾಮ ಮಂದಿರ ನಿರ್ಮಾಣ ಕಾರ್ಯ ಪ್ರಾರಂಭ’! ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭರವಸೆ! ಪ್ರಭು ಶ್ರೀರಾಮನ ಹೆಸರಲ್ಲಿ ದೀಪ ಹಚ್ಚುವಂತೆ ಕರೆ ನೀಡಿದ ಸಿಎಂ! ‘ಈ ಬಾರಿ ಪ್ರಭು ಶ್ರೀರಾಮ ನಮಗೆಲ್ಲಾ ಬೆಳಕು ತೋರಲಿದ್ದಾನೆ’
ಬಿಕಾನೇರ್(ನ.4): ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಹಿಂದೂ ಭಕ್ತರ ಆಶಯಗಳು ದೀಪಾವಳಿಯ ಬಳಿಕ ಶೀಘ್ರವೇ ನಿಜವಾಗಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ರಾಜಸ್ಥಾನದ ಬಿಕಾನೇರ್ ನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಆದಿತ್ಯನಾಥ್, ಈ ಬಾರಿ ನಮಗೆಲ್ಲಾ ಶ್ರೀರಾಮ ಬೆಳಕು ತೋರಲಿದ್ದಾನೆ. ದೀಪಾವಳಿ ಹಬ್ಬದ ಬಳಿಕ ಶೀಘ್ರವೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದರು.
Light a diya for Lord Ram this time, work there will start very soon. We have to take this up after #Diwali: CM Yogi Adityanath in Rajasthan's Bikaner (3.11.18) pic.twitter.com/IL8cuosBaW
— ANI UP (@ANINewsUP) November 4, 2018
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂಬುದು ಪ್ರತಿಯೊಬ್ಬ ಹಿಂದೂವಿನ ಬಯಕೆಯಾಗಿದ್ದು, ಪ್ರಭು ಶ್ರೀರಾಮನ ಆಶೀರ್ವಾದದಿಂದ ಈ ಕನಸು ಈಡೇರಲಿದೆ ಎಂದು ಆದಿತ್ಯನಾಥ್ ಭರವಸೆ ವ್ಯಕ್ತಪಡಿಸಿದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Nov 4, 2018, 7:13 PM IST