ರಾಜ್ಯದಲ್ಲಿ ಒಂದೇ ಸ್ಥಾನದಲ್ಲಿ ಕಾಂಗ್ರೆಸ್ ಜಯಗಳಿಸಿದ್ದು, ಈ ನಿಟ್ಟಿನಲ್ಲಿ ಸೋಲಿನ ಹಿಣೆ ಹೊತ್ತ ಕೈ ಮುಖಂಡ ರಾಜೀನಾಮೆಗೆ ನಿರ್ಧರಿಸಿದ್ದಾರೆ. 

ಲಕ್ನೋ : ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ದೇಶದಲ್ಲಿ ಬಿಜೆಪಿ ಅತಿ ಹೆಚ್ಚಿನ ಸ್ಥಾನ ಗಳಿಸಿದ್ದು ಮತ್ತೊಮ್ಮೆ ಮೋದಿ ಅಲೆ ಎಲ್ಲೆಡೆ ಹರಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರ್ನಾಟಕದಂತೆ ಉತ್ತರ ಪ್ರದೇಶದಲ್ಲಿಯೂ ಕೂಡ 80 ಕ್ಷೇತ್ರಗಳ ಪೈಕಿ 62 ಸ್ಥಾನಗಳಲ್ಲಿ ಬಿಜೆಪಿ ವಿಜಯಿಯಾಗಿದ್ದು, ಈ ಜಯ ಇಲ್ಲಿನ ಕಾಂಗ್ರೆಸ್ ರಾಜ್ಯಾಧ್ಯಕ್ಷ ಪಟ್ಟಕ್ಕೆ ಕುತ್ತು ತಂದಿದೆ. 

ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರವಾನಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಕೇವಲ 1 ಸ್ಥಾನ ಗೆಲ್ಲುವಲ್ಲಿ ಮಾತ್ರವೇ ಸಫಲವಾಗಿದ್ದು, ಸೋಲಿನ ಹೊಣೆ ಹೊತ್ತ ಬಬ್ಬರ್ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. 

ರಾಜ್ಯದಲ್ಲಿ SP - BSP ಮೈತ್ರಿ ಹಿಂದಿಕ್ಕಿ 63 ಸ್ಥಾನ ವಶಪಡಿಸಿಕೊಂಡಿದ್ದು, ನುಂಗಲಾರದ ತುತ್ತಾಗಿದೆ. ಎಸ್ ಪಿ 5 ಸ್ಥಾನ ಪಡೆದಿದ್ದರೆ, ಬಿಎಸ್ ಪಿ 9 ಸ್ಥಾನಗಳಲ್ಲಿ ಜಯಗಳಿಸಿದೆ. 

ಇಲ್ಲಿ ಮೈತ್ರಿ ಹಿಂದಿಕ್ಕುವಲ್ಲಿ ಮಾತ್ರವೇ ಮೋದಿ ಅಲೆ ಕೆಲಸ ಮಾಡದೇ ಕಾಂಗ್ರೆಸ್ ನೆಲಕಚ್ಚುವಂತೆಯೂ ಮಾಡಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 73 ಸ್ಥಾನ ಗಳಿಸಿದ್ದು, ಕಾಂಗ್ರೆಸ್ 2 ರಲ್ಲಿ ವಿಜಯಯಿಯಾಗಿತ್ತು. 

ಸ್ಥಾನ ಕಳೆದುಕೊಳ್ಳಲಿದ್ದಾರಾ ದಿನೇಶ್ ಗುಂಡೂರಾವ್ ?