ಪ್ರಿಯಾಂಕಾ ಆರೋಪಕ್ಕೆ ತಿರುಗೇಟು ಕೊಟ್ಟ ಯುಪಿ ಪೊಲೀಸ್!
ಉತ್ತರಪ್ರದೇಶದಲ್ಲಿ ಜಂಗಲ್ ರಾಜ್ ಅಸ್ತಿತ್ವದಲ್ಲಿದೆ ಎಂದ ಪ್ರಿಯಾಂಕಾ| ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ’| ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ ಪ್ರಿಯಾಂಕಾ ಗಾಂಧಿ| ಪ್ರಿಯಾಂಕಾ ಆರೋಪಕ್ಕೆ ಪ್ರತ್ಯುತ್ತರ ನೀಡಿದ ಯುಪಿ ಪೊಲೀಸ್ ಇಲಾಖೆ| ಅಪರಾಧ ಪ್ರಮಾಣ ತಗ್ಗಿರುವ ಕುರಿತು ಟ್ವೀಟ್’ನಲ್ಲಿ ಮಾಹಿತಿ|
ಲಕ್ನೋ(ಜೂ.29): ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಅಪರಾಧಿಗಳು ನಿರ್ಭಯವಾಗಿ ಓಡಾಡಿಕೊಂಡಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.
पूरे उत्तर प्रदेश में अपराधी खुलेआम मनमानी करते घूम रहे हैं। एक के बाद एक अपराधिक घटनाएँ हो रही हैं। मगर उ.प्र. भाजपा सरकार के कान पर जूँ तक नहीं रेंग रही।
— Priyanka Gandhi Vadra (@priyankagandhi) June 29, 2019
क्या उत्तर प्रदेश सरकार ने अपराधियों के सामने आत्मसमर्पण कर दिया है? pic.twitter.com/khYP4eZam2
ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ರಾಜ್ಯದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಬಿಜೆಪಿ ಆಡಳಿತ ಜಂಗಲ್ ರಾಜ್ ನಂತಾಗಿದೆ ಎಂದು ಗುಡುಗಿದ್ದಾರೆ.
ಆದರೆ ಪ್ರಿಯಾಂಗಾ ಟ್ವೀಟ್’ಗೆ ಸೂಕ್ತ ತಿರುಗೇಟು ನೀಡಿರುವ ಉತ್ತರಪ್ರದೇಶ ಪೊಲೀಸ್ ಇಲಾಖೆ, ರಾಜ್ಯದಲ್ಲಿ ಅಪರಾಧ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂಬುದನ್ನು ಅಂಕಿ ಅಂಶಗಳ ಸಮೇತ ಹೊರಗಡೆವಿದೆ.
गम्भीर अपराधों में यूपी पुलिस द्वारा अपराधियों के विरुद्ध कठोर कार्यवाही की गयी है
— UP POLICE (@Uppolice) June 29, 2019
2 वर्षों में 9225 अपराधी गिरफ़्तार हुए और 81 मारे गये हैं |रासुका में प्रभावी कार्यवाही कर लगभग 2 अरब की सम्पत्ति ज़ब्त की गयी है
डकैती, हत्या, लूट एवं अपहरण जैसी घटनाओं में अप्रत्याशित कमी आई है https://t.co/DE9KmtRBtK
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಪೊಲೀಸ್ ಇಲಾಖೆ, ಅಪರಾಧ ಪ್ರಕರಣಗಳನ್ನು ಹತ್ತಿಕ್ಕುವಲ್ಲಿ ಪೊಲೀಸ್ ಇಲಾಖೆ ಕೈಗೊಂಡಿರುವ ದಿಟ್ಟ ಕ್ರಮಗಳ ಕುರಿತು ವಿವರಣೆ ನೀಡಿದೆ.