ಬಿಜೆಪಿ ಪರಿವರ್ತನಾ ರ್ಯಾಲಿ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾವೇಶದಲ್ಲಿ ಪಕ್ಷದ ಕಾರ್ಯಕರ್ತರು ದಾಂಧಲೆ ನಡೆಸಿದ್ದರಿಂದ ಮನನೊಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ರಾತ್ರಿ ಉಪವಾಸ ಮಲಗಿದ ಪ್ರಸಂಗ ನಡೆದಿದೆ.

ಇಂಡಿ: ಬಿಜೆಪಿ ಪರಿವರ್ತನಾ ರ್ಯಾಲಿ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾವೇಶದಲ್ಲಿ ಪಕ್ಷದ ಕಾರ್ಯಕರ್ತರು ದಾಂಧಲೆ ನಡೆಸಿದ್ದರಿಂದ ಮನನೊಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ರಾತ್ರಿ ಉಪವಾಸ ಮಲಗಿದ ಪ್ರಸಂಗ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಯಾತ್ರೆ ಮುಗಿದ ನಂತರ ಪಟ್ಟಣದ ಅಮರ್ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ಬಿಎಸ್ವೈ ವಾಸ್ತವ್ಯಕ್ಕೆ ಇಂಡಿ ಬಿಜೆಪಿ ಮಂಡಲದ ವತಿಯಿಂದ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಪರಿವರ್ತನಾ ಸಮಾವೇಶದಲ್ಲಿ ರ್ಯಾಲಿಯ ಯಶಸ್ಸಿಗೆ ಬಿಎಸ್‌ವೈ ಅವರು ಮಾಜಿ ಶಾಸಕ ರವಿಕಾಂತ ಪಾಟೀಲರನ್ನು ಹೊಗಳಿದ್ದರಿಂದ ಸ್ಥಳೀಯ ಬಿಜೆಪಿ ಮುಖಂಡರು ತೀವ್ರ ಅಸಮಾಧಾನಗೊಂಡಿದ್ದರು.

ಬಿಎಸ್‌ವೈ ಭಾಷಣ ಮಾಡುತ್ತಿದ್ದ ಸಮಯದಲ್ಲೇ ಕೆಲವರು ವೇದಿಕೆ ಏರಿ ಮೈಕ್ ಕಿತ್ತೆಸೆದು, ಮಣ್ಣು ತೂರಿ ಆಕ್ರೋಶ ಹೊರಹಾಕಿದ್ದರು. ಜತೆಗೆ, ಬಿಎಸ್‌ವೈ ತಂಗಿದ್ದ ಹೋಟೆಲ್‌ನತ್ತ ಸುಳಿಯದೆ ಅಸಮಾಧಾನ ಹೊರಹಾಕಿದ್ದರು. ಇದರಿಂದ ಮನನೊಂದಿದ್ದ ಬಿಎಸ್‌ವೈ ರಾತ್ರಿ ಉಪವಾಸವೇ ಮಲಗಿದರು ಎಂದು ಮೂಲಗಳು ತಿಳಿಸಿವೆ