ಮತ್ತೆ ಸಂಪುಟ ಪುನರ್ ರಚನೆ: 23 ಸಚಿವರ ಪ್ರಮಾಣವಚನ!
ಮತ್ತೆ ಸಂಪುಟ ಪುನರ್ ರಚನೆಗೆ ಸರ್ಕಾರದ ನಿರ್ಧಾರ! 23 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ| ಅಧಿಕಾಕ್ಕೆ ಬಂದು ಎರಡುವರೆ ವರ್ಷದಲ್ಲಿ ಇದೇ ಮೊದಲ ಬಾರಿಗೆ ಸಂಪುಟ ಪುನರ್ ರಚನೆ| ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಬಿಜೆಪಿ ಸರ್ಕಾರ| ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದ ರಾಜ್ಯಪಾಲೆ ಆನಂದಿಬೆನ್ ಪಟೇಲ್|
ಲಕ್ನೋ(ಆ.21): ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ಸಂಪುಟ ಪುನರ್ ರಚನೆ ಮಾಡಲಾಗಿದೆ.
ಅಧಿಕಾರಕ್ಕೆ ಬಂದು ಎರಡುವರೆ ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಯೋಗಿ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಈ ಬಾರಿ ಬರೋಬ್ಬರಿ 23 ಹೊಸ ಶಾಸಕರಿಗೆ ಯೋಗಿ ಸಚಿವ ಸ್ಥಾನ ಕರುಣಿಸಿ ಗಮನ ಸೆಳೆದಿದ್ದಾರೆ.
ಇಂದು ರಾಜಭವನದಲ್ಲಿ 23 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲೆ ಆನಂದಿಬೆನ್ ಪಟೇಲ್ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
6 ಶಾಸಕರು ಸಂಪುಟ ದರ್ಜೆ ಸಚಿವರಾಗಿ, 6 ಶಾಸಕರು ರಾಜ್ಯ ಸ್ವತಂತ್ರ ಪ್ರಭಾರ ಸಚಿವರಾಗಿ ಮತ್ತು 11 ಶಾಸಕರು ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವುದು ವಿಶೇಷ.
ಇದೇ ವೇಳೆ ಪ್ರಸ್ತುತ ನಾಲ್ವರು ರಾಜ್ಯ ಖಾತೆ ಸಚಿವರಿಗೆ ಸಂಪುಟ ದರ್ಜೆ ಸಚಿವರಾಗಿ ಬಡ್ತಿ ನೀಡಲಾಗಿದೆ.