14 ವರ್ಷಗಳ ಹಿಂದೆ ತುಮಕೂರಿನ ಪಾವಗಡದಲ್ಲಿ ನಡೆದ ಪೊಲೀಸರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಕ,ಲೇಖಕ ವರವರ ರಾವ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 

ತುಮಕೂರು [ಜು.04] : ತೆಲುಗಿನ ಕ್ರಾಂತಿಕಾರಿ ಕವಿ ವರವರ ರಾವ್‌ ಅವರನ್ನು ಕರ್ನಾಟಕದ ಪಾವಗಡ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

Add Asianetnews Kannada as a Preferred SourcegooglePreferred

ನಕ್ಸಲ್‌ ಹತ್ಯಾಕಾಂಡ ಪ್ರಕರಣ ಸಂಬಂಧ ಮಹಾರಾಷ್ಟ್ರದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ವರವರ ರಾವ್ ಅವರನ್ನು ಹೈ ಕೋರ್ಟ್ ಆದೇಶದ ಮೇರೆಗೆ ಪೂನಾದಿಂದ ಕರೆತಂದು, ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ತುಮಕೂರು ಜಿಲ್ಲೆ ಪಾವಗಡದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 

2005 ರ ಫೆ.5 ರಂದು ಪಾವಗಡದ ವೆಂಕಟಮ್ಮನಹಳ್ಳಿಯಲ್ಲಿ ನಕ್ಸಲ್ ಹತ್ಯಾಕಾಂಡ ನಡೆದಿದ್ದು, ಈ ಘಟನೆಯಲ್ಲಿ ಓರ್ವ ನಾಗರಿಕ ಸೇರಿ 7 ಮಂದಿ ಪೊಲೀಸರು ಹತ್ಯೆಯಾಗಿದ್ದರು. ವರವರ ರಾವ್ ಪೊಲೀಸರ ಹತ್ಯಾಕಾಂಡದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದವರಿಗೆ ಸಹಕರಿಸಿದ್ದ ಆರೋಪ ಎದುರಿಸುತ್ತಿದ್ದರು. 

ಪಾವಗಡ ನಕ್ಸಲ್‌ ಅಟ್ಟಹಾಸ : ಚಿಂತಕ ವರವರರಾವ್‌ ವಶಕ್ಕೆ

 ಸದ್ಯ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ಆರೋಪದಡಿ ಅವರನ್ನು ಮಹಾರಾಷ್ಟ್ರದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.