68 ವರ್ಷದ ವೆಂಕಯ್ಯ ನಾಯ್ಡು ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯವರಾದರೂ ಕರ್ನಾಟಕದಿಂದ ಮೂರು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಆರೆಸ್ಸೆಸ್ ಸ್ವಯಂಸೇವಕರಾದ ಅವರು ಕಾಲೇಜು ದಿನಗಳಲ್ಲಿ ಎಬಿವಿಪಿಯಲ್ಲಿ ತೊಡಗಿಸಿಕೊಂಡು ಆ ಮೂಲಕ ರಾಜಕೀಯದ ಆರಂಭ ಪಡೆದರು. 1974ರಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಸಮರ್ಪಿಸಿಕೊಂಡ ವೆಂಕಯ್ಯ ನಾಯ್ಡು 1977ರ ತುರ್ತು ಪರಿಸ್ಥಿತಿ ವೇಳೆ ಬಂಧನಕ್ಕೊಳಗಾದರು.
ನವದೆಹಲಿ(ಆ. 11): ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ವೆಂಕಯ್ಯ ನಾಯ್ಡು ದೇಶದ 13ನೇ ಉಪರಾಷ್ಟ್ರಪತಿಯಾಗಿ ಪದಗ್ರಹಣ ಮಾಡಿದರು. ಶುಕ್ರವಾರ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್'ನಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ವೆಂಕಯ್ಯನಾಯ್ಡು ಪ್ರಮಾಣ ವಚನ ಸ್ವೀಕರಿಸಿದರು. ನಿನ್ನೆಯಷ್ಟೇ ಹಮೀದ್ ಅನ್ಸಾರಿ ಅವರ ಉಪರಾಷ್ಟ್ರಪತಿ ಹುದ್ದೆಯ ಅವಧಿ ಮುಕ್ತಾಯಗೊಂಡಿತ್ತು.
68 ವರ್ಷದ ವೆಂಕಯ್ಯ ನಾಯ್ಡು ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯವರಾದರೂ ಕರ್ನಾಟಕದಿಂದ ಮೂರು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಆರೆಸ್ಸೆಸ್ ಸ್ವಯಂಸೇವಕರಾದ ಅವರು ಕಾಲೇಜು ದಿನಗಳಲ್ಲಿ ಎಬಿವಿಪಿಯಲ್ಲಿ ತೊಡಗಿಸಿಕೊಂಡು ಆ ಮೂಲಕ ರಾಜಕೀಯದ ಆರಂಭ ಪಡೆದರು. 1974ರಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಸಮರ್ಪಿಸಿಕೊಂಡ ವೆಂಕಯ್ಯ ನಾಯ್ಡು 1977ರ ತುರ್ತು ಪರಿಸ್ಥಿತಿ ವೇಳೆ ಬಂಧನಕ್ಕೊಳಗಾದರು.
2002ರಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ, ವಕ್ತಾರ ಹೀಗೆ ಹಲವು ಸ್ತರಗಳಲ್ಲಿ ಬಿಜೆಪಿ ಪಕ್ಷದ ನಾಯಕತ್ವ ವಹಿಸಿದ ಅನುಭವಸ್ಥರು. ವಾಜಪೇಯಿ ಹಾಗೂ ಮೋದಿ ಸರಕಾರಗಳಲ್ಲಿ ಸಚಿವರಾಗಿ ದುಡಿದಿದ್ದಾರೆ.
