ಪತ್ರಿಕೋದ್ಯಮಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ರಾಜ್ಯ ಸರ್ಕಾರ ಕೊಡ ಮಾಡುವ 2016 ನೇ ಸಾಲಿನ  ‘ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ’ಗೆ ಪ್ರಜಾವಾಣಿ ನಿವೃತ್ತ ಸಹ ಸಂಪಾದಕ ನಾಗೇಶ ಹೆಗಡೆ ಹಾಗೂ ‘ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ’ಗೆ ಕಾರವಾರದ ಕರಾವಳಿ ಮುಂಜಾವು ಸಂಪಾದಕ ಗಂಗಾಧರ ಹಿರೇಗುತ್ತಿ ಭಾಜನರಾಗಿದ್ದಾರೆ.

ಬೆಂಗಳೂರು (ಮೇ.15): ಪತ್ರಿಕೋದ್ಯಮಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ರಾಜ್ಯ ಸರ್ಕಾರ ಕೊಡ ಮಾಡುವ 2016 ನೇ ಸಾಲಿನ ‘ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ’ಗೆ ಪ್ರಜಾವಾಣಿ ನಿವೃತ್ತ ಸಹ ಸಂಪಾದಕ ನಾಗೇಶ ಹೆಗಡೆ ಹಾಗೂ ‘ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ’ಗೆ ಕಾರವಾರದ ಕರಾವಳಿ ಮುಂಜಾವು ಸಂಪಾದಕ ಗಂಗಾಧರ ಹಿರೇಗುತ್ತಿ ಭಾಜನರಾಗಿದ್ದಾರೆ.
ಪ್ರಶಸ್ತಿ ಒಂದು ಲಕ್ಷ ರು. ನಗದು ಮತ್ತು ಸ್ಮರಣ ಫಲಕವನ್ನು ಒಳಗೊಂಡಿದೆ. ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಇಂದ್ರಕಲಾ ಅಧ್ಯಕ್ಷತೆಯ ಆಯ್ಕೆ ಸಮಿತಿ ಇವರ ಹೆಸರನ್ನು ಶಿಫಾರಸು ಮಾಡಿತ್ತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred