ಬ್ಯಾಂಕ್ ಗಳಿಂದ ಸಾಲ ಪಡೆದು ವಂಚಿಸಿದ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ಅವರನ್ನು ಘೋಷಿತ ಅಪರಾಧಿ ಎಂದು ಘೋಷಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಪಿಎಂಎಲ್ ಎ ಕೋರ್ಟ್, ಮಧ್ಯದ ದೊರೆ ಅಪರಾಧಿ ಎಂದು ಘೋಷಿಸಿದೆ. ಅಲ್ಲದೆ ವಿಜಯ್ ಮಲ್ಯ ಅವರ ಚರಾಸ್ಥಿಯ ವಿವರ ಸಲ್ಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದೆ.

ಮುಂಬೈ(ನ.11): ದೇಶದ ವಿವಿಧ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಘೋಷಿತ ಅಪರಾಧಿ ಎಂದು ನಿನ್ನೆ ಮುಂಬೈ ವಿಶೇಷ ಕೋರ್ಟ್ ಘೋಷಿಸಿದೆ.

ಬ್ಯಾಂಕ್ ಗಳಿಂದ ಸಾಲ ಪಡೆದು ವಂಚಿಸಿದ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ಅವರನ್ನು ಘೋಷಿತ ಅಪರಾಧಿ ಎಂದು ಘೋಷಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಪಿಎಂಎಲ್ ಎ ಕೋರ್ಟ್, ಮಧ್ಯದ ದೊರೆ ಅಪರಾಧಿ ಎಂದು ಘೋಷಿಸಿದೆ. ಅಲ್ಲದೆ ವಿಜಯ್ ಮಲ್ಯ ಅವರ ಚರಾಸ್ಥಿಯ ವಿವರ ಸಲ್ಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದೆ.

ಇದೇ ವೇಳೆ ವಿಜಯ್ ಮಲ್ಯ ಅವರ ವಿದೇಶಿ ಆಸ್ತಿಯನ್ನು ಲಗತ್ತಿಸಬೇಕು ಎಂಬ ಜಾರಿ ನಿರ್ದೇಶನಾಲಯದ ಮನವಿಯನ್ನು ನ್ಯಾಯಾಧೀಶ ಪಿ.ಆರ್.ಭಾವ್ಕೆ ಅವರು ತಿರಸ್ಕರಿಸಿದ್ದಾರೆ.