ಗ್ರಾಮದ ತುಂಬಾ ಚರಂಡಿ ನೀರು ಹರಿಯುತ್ತಿದ್ದು, ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಬೇಸತ್ತ ಲಕ್ಕುಂಡಿ ಗ್ರಾಮಸ್ಥರು ಬೀದಿಯಲ್ಲಿ ಭಜನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಗದಗ (ಅ.24): ಚರಂಡಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗದಗ ತಾಲೂಕಿನ ಲಕ್ಕುಂಡಿ ಗ್ರಾಮಸ್ಥರು ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಜನೆ ಮಾಡುವ ಮೂಲಕ ಅಧಿಕಾರಿಗಳ ಬೇಜವಾಬ್ದಾರಿಯನ್ನು ಖಂಡಿಸಿದ್ದಾರೆ. ಸಮರ್ಪಕ ನಿರ್ವಹಣೆ ಇಲ್ಲದೆ ಗ್ರಾಮದ ತುಂಬಾ ಚರಂಡಿ ನೀರು ಹರಿಯುತ್ತಿದ್ದು, ಈ ಬಗ್ಗೆ ಗ್ರಾಮ ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. 

ಆದರೆ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಇದರಿಂದ ಬೇಸತ್ತ ಲಕ್ಕುಂಡಿ ಗ್ರಾಮಸ್ಥರು ಬೀದಿಯಲ್ಲಿ ಭಜನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಜನಪದ ಶೈಲಿಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಚಾಟಿ ಬೀಸಿದ್ದಾರೆ.