ಶಾಸಕ ಬಾಲಕೃಷ್ಣರನ್ನು 2 ಕಿ.ಮೀ. ನಡೆಸಿದ ಗ್ರಾಮಸ್ಥರು! ಕೆರೆಗೆ ನೀರು ತುಂಬಿಸದಿದ್ದರೇ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ| ಪ್ರತಿಭಟನಾಕಾರರ ಸಮಾಧಾನ ಪಡಿಸಲು ಹೋಗಿ ಬೆವರಿಳಿದ ಶಾಸಕ

ಚನ್ನರಾಯಪಟ್ಟಣ[ಮಾ.25]: ಕೆರೆಗಳಿಗೆ ನೀರು ತುಂಬಿಸದಿದ್ದರೇ ಲೋಕಸಭಾ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಪ್ರತಿಭಟಿಸುತ್ತಿರುವವರ ಸಮಾಧಾನ ಪಡಿಸಲು ಹೋದ ಶಾಸಕ ಸಿ.ಎನ್‌.ಬಾಲಕೃಷ್ಣ ಅವರನ್ನು ಏರು ಬಿಸಿಲಿನಲ್ಲಿಯೇ ಗ್ರಾಮಸ್ಥರು 2 ಕಿ.ಮೀ. ನಡೆಸಿ ಬೆವರಿಸಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಭಾನುವಾರ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚನ್ನರಾಯಪಟ್ಟಣ ತಾಲೂಕಿನ ದಿಡಗ ಮತ್ತು ಕಬ್ಬಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಹತ್ತಾರು ಹಳ್ಳಿಗಳ ಜನರು, ಕೆರೆಗಳಿಗೆ ನೀರು ತುಂಬಿಸಬೇಕು. ಇಲ್ಲದಿದ್ದರೆ ಈ ಬಾರಿಯ ಲೋಕಸಭಾ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಶಾಸಕ ಬಾಲಕೃಷ್ಣ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಆಗಮಿಸಿದ್ದರು. ಆಗ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಕೆರೆ ನೋಡಿ ಎಂದು ಹೇಳಿದ್ದಾರೆ. ಹೀಗಾಗಿ ಶಾಸಕರು ಬಿಸಿಲಿನಲ್ಲೇ ಗ್ರಾಮಸ್ಥರೊಂದಿಗೆ 2 ಕಿ.ಮೀ ನಡೆದಿದ್ದಾರೆ. ನಂತರ ಕೆರೆಯ ಬಳಿ ಕೂತು ಮಾತುಕತೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಕೆರೆಗಳಿಗೆ ನೀರು ತುಂಬಿಸಲು ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡರು.

ಚನ್ನರಾಯಪಟ್ಟಣ ತಾಲೂಕು ದಿಡಗ ಮತ್ತು ಕಬ್ಬಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆ ಬಂದು 25 ವರ್ಷ ಕಳೆದಿವೆ. ಮಳೆಯಿಲ್ಲದೆ ಕೆರೆಕಟ್ಟೆಗಳ ಒಡಲು ಬರಿದಾಗಿದ್ದು, ನೀರಿಲ್ಲದೇ ಜನ-ಜಾನುವಾರು ಪರದಾಡುವಂತಾಗಿದೆ. ಲಕ್ಷ ಲಕ್ಷ ಖರ್ಚು ಮಾಡಿ 1 ಸಾವಿರ ಅಡಿ ಆಳ ಕೊಳವೆ ಬಾವಿ ಕೊರೆದರೂ, ನೀರು ಬರುತ್ತಿಲ್ಲ. ಗಾಯದ ಮೇಲೆ ಬರೆ ಎಂಬಂತೆ, ಫೆä್ಲೕರೈಡ್‌ ಭೀತಿಯೂ ನಮ್ಮನ್ನು ಕಾಡುತ್ತಿದೆ. ಕೆರೆ-ಕಟ್ಟೆತುಂಬಿಸಿ, ನಮ್ಮ ಸಮಸ್ಯೆ ಕೊನೆಗಾಣಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಶಾಸಕರಿಂದ ಕೆರೆ ತುಂಬಿಸುವ ಭರವಸೆ:

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಶಾಸಕ ಬಾಲಕೃಷ್ಣ, ನಾಗಮಂಗಲದ ನಾಲೆಯಿಂದ ನೀರು ತರೋ ಯೋಜನೆ ವಿಳಂಬವಾಗಿದೆ. ಈಗಾಗಲೇ ಸರ್ಕಾರ, ಉಸ್ತುವಾರಿ ಸಚಿವರು ಮತ್ತು ಸಂಬಂಧಪಟ್ಟಅಧಿಕಾರಿಗಳ ಜೊತೆ ಮಾತನಾಡಿದ್ದು, ಆದಷ್ಟುಶೀಘ್ರವೇ ಬಹುದಿನಗಳ ಸಮಸ್ಯೆ ಬಗೆಹರಿಸಲಾಗುವುದು. ಈ ಬಾರಿಯ ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ನೀರಿನ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭಾರವಸೆ ನೀಡಿದರು.