ವಿಜಯಪುರದಲ್ಲಿ ಸಮಾಜವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಗ್ರಾಮಸ್ಥರೆಲ್ಲಾ ಸೇರಿ ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಮನಬಂದಂತೆ ಥಳಿಸಿದ್ದಾರೆ.

ವಿಜಯಪುರ(ಫೆ.12): ವಿಜಯಪುರದಲ್ಲಿ ಸಮಾಜವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಗ್ರಾಮಸ್ಥರೆಲ್ಲಾ ಸೇರಿ ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಮನಬಂದಂತೆ ಥಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಶ್ರೀಕಾಂತ್ ಬೀರಗೊಂಡ ಎಂಬ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದ. ಈ ಕೊಲೆಯನ್ನ ಆತನ ಪತ್ನಿ ರೇಣುಕಾರೇ ಮಾಡಿಸಿದ್ದಾರೆ ಅನ್ನೋದು ಗ್ರಾಮಸ್ಥರ ಅನುಮಾನ. ಆದರೆ, ಆ ಮಹಿಳೆಯ ಬೆಂಬಲಕ್ಕೆ ಬಂದ ತಪ್ಪಿಗೆ ಈಗ ಮಹಿಳಾ ಸಂಘಟನೆ ಕಾರ್ಯಕರ್ತೆಯೊಬ್ಬರನ್ನು ಗ್ರಾಮಸ್ಥರು ನಡುಬೀದಿಯಲ್ಲಿ ಬಟ್ಟೆ ಬಿಚ್ಚಿ ಅವಮಾನ ಮಾಡಿದ್ದಾರೆ. ಮನಬಂದಂತೆ ಥಳಿಸಿದ್ದಾರೆ.

ಕೊಲೆ ಆರೋಪಿಗೆ ಮಹಿಳಾ ಸಂಘಟನೆ ಕಾರ್ಯಕರ್ತೆ ರಕ್ಷಣೆ ಕೊಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.