ನೆರೆಯ ಸಿಎಂ ಕ್ಷೇತ್ರದಲ್ಲಿ ಮಹಿಳೆಯರಿಂದಲೇ ಮಹಿಳೆಯ ಮಾನಹರಣ
ಈ ಘಟನೆ ನಡೆಯುವಾಗ ಹಳ್ಳಿಯ ಜನರು ಮೂಕಪ್ರೇಕ್ಷಕರಂತೆ ನೋಡುತ್ತಿದ್ದರು
ಕುಪ್ಪಂ(ಜ.18): ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ಅವರ ಕುಪ್ಪಂ ಕ್ಷೇತ್ರದಲ್ಲಿ ಮಹಿಳೆಯರಿಂದಲೇ ಮಹಿಳೆಯ ವಿವಸ್ತ್ರಗೊಳಿಸಿದ ಧಾರುಣ ಘಟನೆ ನಡೆದಿದೆ.
ಚಿತ್ತೂರು ಜಿಲ್ಲೆಯ ಶಾಂತಪುರ ಮಂಡಲಂ ಗುಂಜಾರ್ಲಹಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧದ ಆರೋಪದ ಮೇಲೆ ಯುವತಿಯೊಬ್ಬಳನ್ನು ಹತ್ತಾರು ಮಹಿಳೆಯರು ಮನೆಯಿಂದ ಹೊರಗೆಳೆದು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ. ಈ ಘಟನೆ ನಡೆಯುವಾಗ ಹಳ್ಳಿಯ ಜನರು ಮೂಕಪ್ರೇಕ್ಷಕರಂತೆ ನೋಡುತ್ತಿದ್ದರು. ಕುಪ್ಪಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿವಸ್ತ್ರಗೊಳಿಸಿದ ಮಹಿಳೆಯ ವಿರುದ್ಧ ದೂರು ದಾಖಲಿಸಲಾಗಿದೆ.