ಉರಿ ದಾಳಿಯಲ್ಲಿ ಮೃತಪಟ್ಟ ಸೈನಿಕ ಕುಟುಂಬಗಳಿಗೆ ವಿರಾಟ್ ಕೋಹ್ಲಿ ಸಂತಾಪ
ಕಾನ್ಪುರ (ಸೆ.26): ಉರಿ ಸೇನಾ ನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 18 ಸೈನಿಕರ ಕುಟುಂಬಗಳಿಗೆ ಕ್ರಿಕೆಟಿಗ ವಿರಾಟ್ ಕೋಹ್ಲಿ ಸಂತಾಪ ಸೂಚಿಸಿದ್ದಾರೆ.
ಈ ರೀತಿ ದಾಳಿಗಳು ಮುಂದುವರೆಯುತ್ತಿರುವುದು ಖೇದನೀಯ. ಆ ಕುಟುಂಬಗಳ ಸ್ಥಿತಿಯನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇಂತಹ ಘಟನೆಗಳಿಂದ ಪ್ರತಿಯೊಬ್ಬ ಭಾರತೀಯನಿಗೂ ನೋವಾಗುತ್ತದೆ. ದಾಳಿಯಲ್ಲಿ ಮೃತಪಟ್ಟ ಸೈನಿಕ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ ಎಂದು ಕೊಹ್ಲಿ ಹೇಳಿದ್ದಾರೆ.