ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ಇದೀಗ ಒತ್ತಡ ಹೆಚ್ಚಾಗಿದ್ದು,   ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವನ್ನ ಒತ್ತಾಯಿಸಲು ವಿಶ್ವ ಹಿಂದೂ ಪರಿಷತ್ ಸಜ್ಜಾಗಿದ್ದು, ದೇಶವ್ಯಾಪಿ ಜನಾಗ್ರಹ ಸಭೆ ಆಯೋಜನೆ ಮಾಡಲಾಗಿದೆ.  

ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವನ್ನ ಒತ್ತಾಯಿಸಲು ವಿಶ್ವ ಹಿಂದೂ ಪರಿಷತ್ ಸಜ್ಜಾಗಿದ್ದು, ದೇಶವ್ಯಾಪಿ ಜನಾಗ್ರಹ ಸಭೆ ಆಯೋಜನೆ ಮಾಡಲಾಗಿದೆ. 

Add Asianetnews Kannada as a Preferred SourcegooglePreferred

ಈ ಸಂಬಂಧ ಬೆಂಗಳೂರು, ನಾಗಪುರ, ಆಯೋಧ್ಯೆ, ದೆಹಲಿಯಲ್ಲಿ ಬೃಹತ್ ಜನಾಗ್ರಹ ಸಭೆಯನ್ನು ನಡೆಸಲಾಗುತ್ತಿದೆ. ಬೆಂಗಳೂರು ಮತ್ತು ನಾಗಪುರದಲ್ಲಿ ಇದೇ ನ.25ರಂದು ಬೃಹತ್ ಹಿಂದು ಸಮಾವೇಶ ನಡೆಯಲಿದ್ದು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ಬೃಹತ್ ಜನಾಗ್ರಹ ಸಭೆ ನಡೆಸಲಾಗುತ್ತದೆ.

ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಭಾನುವಾರ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು, ಆದಿಚುಂಚನಗಿರಿ ಮಠದ ನಿರ್ಮಾಲಾನಂದ ಸ್ವಾಮಿಗಳು, ಸಿದ್ದಗಂಗಾ ಮಠದ ಸಿದ್ದಲಿಂಗಾ ಮಹಸ್ವಾಮಿಗಳು ಆಶಿರ್ವಚನ ನೀಡಲಿದ್ದಾರೆ. 

ಅಲ್ಲದೇ ಸಮಾವೇಶದಲ್ಲಿ ವಿಹೆಚ್ ಪಿಯ ಅಂತರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಮಿಲಿಂದಜೆ ಪರಾಂಡೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹಕಾರ್ಯವಹರಾದ ಭಯ್ಯಾಜಿ ಮತ್ತು ಹರಿದ್ವಾರದ ಚಿನ್ಮಯಾನಂದ ಸರಸ್ವತಿ ಮಹಾರಾಜ್ ಭಾಗಿಯಾಲಿದ್ದಾರೆ.

ರಾಮ ಮಂದಿರ ವಿಚಾರದಲ್ಲಿ ನ್ಯಾಯಾಲಯದಿಂದ ವಿಳಂಬವಾಗುತ್ತಿದ್ದೆ ಇದನ್ನ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಮಸೂದೆಯನ್ನ ಅಂಗಿಕರಿಸಬೇಕು ಎಂಬುದು ಆಗ್ರಹ.