ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ನಮ್ಮ ವಿರೋಧವಿದೆ : ಶೆಟ್ಟರ್
ಬೆಂಗಳೂರು(ಅ.03): ಕಾವೇರಿ ನಿರ್ವಹಣಾ ಮಂಡಳಿಯಿಂದ ರಾಜ್ಯಕ್ಕೆ ಮಾರಕವಾಗಲಿದೆ ಈ ಹಿನ್ನಲೆಯಲ್ಲಿ ಮಂಡಳಿ ರಚನೆಗೆ ನಮ್ಮ ವಿರೋಧವಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಇಷ್ಟು ಶೀಘ್ರವಾಗಿ ಮಂಡಳಿ ತರುವ ಅಗತ್ಯ ಇಲ್ಲ, ಈ ಹಿನ್ನೆಲೆಯಲ್ಲಿ ನಾವು ಕೇಂದ್ರದ ಮೇಲೆ ಮಂಡಳಿ ರಚಿಸಿದಂತೆ ಒತ್ತಡ ಹೇರಿದ್ದೇವೆ ಎಂದು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಮಂಡಳಿ ಅಸ್ತಿತ್ವಕ್ಕೆ ತರಲು ಸಾಧ್ಯವಿಲ್ಲ ಎಂದು ಇವತ್ತು ಅಟಾರ್ನಿ ಜನರಲ್ ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.