ಉಡುಪಿಯಲ್ಲಿ ಜೂ.13 ರಂದು ಇಫ್ತಾರ್ ಕೂಟ ಆಯೋಜಿಸಲು ಚಿಂತಿಸಲಾಗಿದೆ ಎಂದು ಪೇಜಾವರ ಮಠದ ಪೀಠಾಧಿಪತಿ ವಿಶ್ವೇಶ ತೀರ್ಥ ಶ್ರೀಗಳು ತಿಳಿಸಿದರು. ಮಂತ್ರಾಲಯದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಫ್ತಾರ್  ಕೂಟ ಆಯೋಜನೆ ಬಗ್ಗೆ ಯಾವುದೇ ಮಠದ ವಿರೋಧವಿಲ್ಲ. 

ರಾಯಚೂರು: ಉಡುಪಿಯಲ್ಲಿ ಜೂ.13 ರಂದು ಇಫ್ತಾರ್ ಕೂಟ ಆಯೋಜಿಸಲು ಚಿಂತಿಸಲಾಗಿದೆ ಎಂದು ಪೇಜಾವರ ಮಠದ ಪೀಠಾಧಿಪತಿ ವಿಶ್ವೇಶ ತೀರ್ಥ ಶ್ರೀಗಳು ತಿಳಿಸಿದರು. ಮಂತ್ರಾಲಯದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಫ್ತಾರ್ ಕೂಟ ಆಯೋಜನೆ ಬಗ್ಗೆ ಯಾವುದೇ ಮಠದ ವಿರೋಧವಿಲ್ಲ. 

Add Asianetnews Kannada as a Preferred SourcegooglePreferred

ಆದರೆ ಇಫ್ತಾರ್ ಕುರಿತು ಮುಸ್ಲಿಂ ಸಮುದಾಯದವರಲ್ಲಿ ಸಂಕೋಚ ಮನೋಭಾವನೆ ಇದ್ದು, ಈ ಕುರಿತು ಅವರ ಜೊತೆ ಚರ್ಚಿಸಲಾಗುವುದು ಎಂದರು. 

ಪ್ರಧಾನಿ ಅವರ ಆಡಳಿತ ವೈಖರಿ ಬಗ್ಗೆ ಅಸಮಾಧಾನವಿಲ್ಲ. ಆದರೆ, ಮೋದಿ ಚುನಾವಣೆ ಪೂರ್ವದಲ್ಲಿ ಕಪ್ಪು ಹಣ ತರಲಾಗುವುದು ಹಾಗೂ ಗಂಗಾ ನದಿ ಶುದ್ಧೀಕರಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಎರಡೂ ಕೆಲಸಗಳನ್ನು ಮಾಡಿಲ್ಲ ಎಂದರು.