ಸಚಿವರ ಸ್ವಾಗತದ ವಿಚಾರ ಯುವಕನೊಬ್ಬನ ಪ್ರಾಣ ಬಲಿ ಪಡೆದಿದೆ. ಸಚಿವ ಪ್ರಿಯಾಂಕ ಖರ್ಗೆ ಕಟೌಟ್ ತೆಗೆಯಲು ಹೋದ ಯುವಕ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾನೆ.

ಕಲಬುರಗಿ[ಜೂ.30] ಸಚಿವರ ಸ್ವಾಗತಕ್ಕೆ ಕಟ್ಟಿದ್ದ ಬ್ಯಾನರ್ ತೆರವು ಮಾಡಲು ಹೋಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಸ್ವಾಗತಕ್ಕೆ ಹಾಕಿದ್ದ ಬ್ಯಾನರ್ ತೆರವು ಮಾಡುವ ವೇಳೆ ಅವಘಡ ಸಂಭವಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಲಬುರಗಿ ಹೊರವಲಯದ ಹುಮನಾಬಾದ್ ರಸ್ತೆ ಬದಿ ಬಿದ್ದಿದ್ದ ಪ್ರಿಯಾಂಕ ಖರ್ಗೆ ಭಾವಚಿತ್ರವುಳ್ಳ ಬ್ಯಾನರ್ ಕಟೌಟ್ ತೆಗೆಯುವಾಗ ಯುವಕನಿಗೆ ವಿದ್ಯುತ್ ಶಾಕ್ ತಗುಲಿದೆ. ಶನಿವಾರ ಬೆಳಗಿನ ಜಾವವೇ ಅವಘಡ ಸಂಭವಿಸಿದೆ. ಇದಾದ ಮೇಲೆ ಯುವಕನ ಸಂಬಂಧಿಕರು ಮತ್ತು ರಸ್ತೆ ತಡೆದು ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಧಾವಿಸಿದ ಪೊಲೀಶರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.