ಮುರ್ಡೇಶ್ವರದ ಬೈಲೂರು ವ್ಯಾಪ್ತಿಯ ದೊಡ್ಡಬಲ್ಸೆ ನಿವಾಸಿ ಕೃಷ್ಣ ಸಣ್ಣತಮ್ಮ ನಾಯ್ಕ(30) ಬಂಧಿತ ಆರೋಪಿ. ರಿಕ್ಷಾ ಚಾಲಕನಾಗಿದ್ದ ಈತ ‘ಡಿ ಬಲ್ಸೆ ಬಾಯ್ಸ್' ಎಂಬ ವಾಟ್ಸ್‌'ಆ್ಯಪ್‌ ಗ್ರೂಪ್‌'ನ ಅಡ್ಮಿನ್‌ ಆಗಿದ್ದ. ಈ ಗ್ರೂಪ್‌'ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ತಿರುಚಿ ಅಶ್ಲೀಲಗೊಳಿಸಿ ಅವಹೇಳನ ಮಾಡಿದ್ದ ಫೋಟೋವೊಂದು ಹರಿದಾಡಿತ್ತು

ಭಟ್ಕಳ: ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಬಳಕೆದಾರರೇ ಎಚ್ಚರ. ವಾಟ್ಸಪ್‌, ಫೇಸ್‌'ಬುಕ್‌ ಗ್ರೂಪ್‌'ಗಳಲ್ಲಿ ಅವಹೇಳನಕಾರಿ ಪೋಸ್ಟ್‌'ಗಳನ್ನು ಪ್ರಕಟಿಸಿದರೆ ಗ್ರೂಪ್‌ ಅಡ್ಮಿನ್‌ ಜೈಲಿಗೆ ಹೋಗಬೇಕಾದೀತು. ಈ ರೀತಿಯ ಕಾನೂನು ಜಾರಿಗೆ ಬಂದ ಕೆಲ ದಿನಗಳಲ್ಲೇ ವಾಟ್ಸಪ್‌ ಅಡ್ಮಿನ್‌'ರನ್ನು ಜೈಲಿಗೆ ಕಳುಹಿಸಿದ ಕರ್ನಾಟಕದ ಮೊದಲ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ವಾಟ್ಸಪ್‌'ನಲ್ಲಿ ಅವಹೇಳನ ಮಾಡಿದ ಆರೋಪಕ್ಕಾಗಿ ಮುರ್ಡೇಶ್ವರ ಠಾಣೆ ಪೊಲೀಸರು ವಾಟ್ಸಪ್‌ ಗ್ರೂಪ್‌'ವೊಂದರ ಅಡ್ಮಿನ್‌'ನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುರ್ಡೇಶ್ವರದ ಬೈಲೂರು ವ್ಯಾಪ್ತಿಯ ದೊಡ್ಡಬಲ್ಸೆ ನಿವಾಸಿ ಕೃಷ್ಣ ಸಣ್ಣತಮ್ಮ ನಾಯ್ಕ(30) ಬಂಧಿತ ಆರೋಪಿ. ರಿಕ್ಷಾ ಚಾಲಕನಾಗಿದ್ದ ಈತ ‘ಡಿ ಬಲ್ಸೆ ಬಾಯ್ಸ್' ಎಂಬ ವಾಟ್ಸ್‌'ಆ್ಯಪ್‌ ಗ್ರೂಪ್‌'ನ ಅಡ್ಮಿನ್‌ ಆಗಿದ್ದ. ಈ ಗ್ರೂಪ್‌'ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ತಿರುಚಿ ಅಶ್ಲೀಲಗೊಳಿಸಿ ಅವಹೇಳನ ಮಾಡಿದ್ದ ಫೋಟೋವೊಂದು ಹರಿದಾಡಿತ್ತು. ಈ ಸಂಬಂಧ ಆನಂದ ಮಂಜುನಾಥ ನಾಯ್ಕ ಎಂಬುವರು ಮುರಡೇಶ್ವರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಗಣೇಶ ನಾಯ್ಕ ಎಂಬಾತನನ್ನೂ ಪೊಲೀಸರು ಬಂಧಿಸಿದ್ದು ಆತನಿಗೆ ನ್ಯಾಯಾಲಯದಲ್ಲಿ ಜಾಮೀನು ದೊರೆತಿದೆ. ಬಾಲಕೃಷ್ಣ ನಾಯ್ಕ ಎಂಬಾತ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಕನ್ನಡಪ್ರಭ ವಾರ್ತೆ
epaper.kannadaprabha.in