ಸ್ಟರ್ಲೈಟ್ ಹಿಂಸಾಚಾರದಲ್ಲಿ ಗಾಯಗೊಂಡವರ ಭೇಟಿಗೆ ಆಗಮಿಸಿದ್ದ ನಟ ಕಂ ರಾಜಕಾರಣಿ ರಜನೀಕಾಂತ್ ಅವರನ್ನು ಗಾಯಾಳುವೊಬ್ಬ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಘಟನೆ ತೂತ್ತುಕುಡಿಯ ಆಸ್ಪತ್ರೆಯಲ್ಲಿ  ನಡೆದಿದೆ.  

ಚೆನ್ನೈ (ಮೇ. 31): ಸ್ಟರ್ಲೈಟ್ ಹಿಂಸಾಚಾರದಲ್ಲಿ ಗಾಯಗೊಂಡವರ ಭೇಟಿಗೆ ಆಗಮಿಸಿದ್ದ ನಟ ಕಂ ರಾಜಕಾರಣಿ ರಜನೀಕಾಂತ್ ಅವರನ್ನು ಗಾಯಾಳುವೊಬ್ಬ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಘಟನೆ ತೂತ್ತುಕುಡಿಯ ಆಸ್ಪತ್ರೆಯಲ್ಲಿ ನಡೆದಿದೆ. 

Add Asianetnews Kannada as a Preferred SourcegooglePreferred

ಗಾಯಾಳುಗಳ ಸ್ಥಿತಿಗತಿ ವಿಚಾರಣೆಗಾಗಿ ಆಸ್ಪತ್ರೆಗೆ ಆಗಮಿಸಿದ ರಜನೀಕಾಂತ್ ಅವರನ್ನು ತಡೆದ ಗಾಯಾಳು ಯುವಕನೋರ್ವ, ‘ನೀನ್ಯಾರು,’ ಎಂದು ಪ್ರಶ್ನಿಸಿದ್ದಾನೆ. ಇದಕ್ಕೆ ರಜನಿ ಸೌಮ್ಯವಾಗಿಯೇ ‘ನಾನು ರಜನೀಕಾಂತ್ ಚೆನ್ನೈನಿಂದ ಬಂದಿದ್ದೇನೆ’ ಎಂದಿದ್ದಾರೆ. 

ಈ ಉತ್ತರಕ್ಕೂ ತಣ್ಣಗಾಗದ ಯುವಕ, ‘ನಮ್ಮ ಭೇಟಿಗೆ ಬರಲು ನಿಮಗೆ 100 ದಿನಗಳು ಬೇಕಾಯಿತೇ’ ಎಂದು ಕಿಡಿಕಾರಿದ್ದಾನೆ. ಈ ಮೂಲಕ 100 ದಿನಗಳಿಂದ ಸ್ಟರ್ಲೈಟ್ ವಿರುದ್ಧ ಪ್ರತಿಭಟನೆ ಕೈಗೊಂಡಿದ್ದರೂ, ಅದಕ್ಕೆ ಸಹಕಾರ ನೀಡದ್ದಕ್ಕೆ

ರಜನೀಕಾಂತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಇದೇ ಔಏಳೆ ಸ್ಟರ್ಲೈಟ್ ಹಿಂಸಾಚಾರದಲ್ಲಿ ಸಾವನ್ನಪ್ಪಿದ 13 ಜನರ ಕುಟುಂಬ ಸದಸ್ಯರಿಗೆ ರಜನಿ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.