ಮಲ್ಲೇಶ್ವರಂ ಟಿಕೆಟ್’ಗಾಗಿ ನಟ – ನಿವೃತ್ತ ಪೊಲೀಸ್ ಅಧಿಕಾರಿ ನಡುವೆ ಕಾಂಪಿಟೇಷನ್
ಹಿರಿಯ ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ಗಾಗಿ ಪ್ರಯತ್ನ ನಡೆಸಿದ್ದಾರೆ.
ಬೆಂಗಳೂರು : ಹಿರಿಯ ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ಗಾಗಿ ಪ್ರಯತ್ನ ನಡೆಸಿದ್ದಾರೆ.
ಆದರೆ, ಕಾಂಗ್ರೆಸ್ಸಿನ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಅವರ ಸಹೋದರರೂ ಆಗಿರುವ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಅವರು ಕಳೆದ ಬಾರಿ ಸ್ಪರ್ಧಿಸಿ ಸೋಲುಂಡಿದ್ದರು.
ಈ ಬಾರಿಯೂ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಹೀಗಿರುವಾಗ ರಾಕ್ಲೈನ್ ವೆಂಕಟೇಶ್ ಅವರಿಗೆ ಟಿಕೆಟ್ ಸಿಗುತ್ತಾ ಎಂಬುದು ಕುತೂಹಲಕರವಾಗಿದೆ.