Asianet Suvarna News Asianet Suvarna News

ಬಿಜೆಪಿಯಿಂದ ರಾಜ್ಯಸಭೆ ಚುನಾವಣೆಗೆ ಅಂತಿಮವಾಗದ ಅಭ್ಯರ್ಥಿ

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭಿಸಬಹುದಾದ ಒಂದು ಸ್ಥಾನಕ್ಕೆ ಇದುವರೆಗೆ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ.

Who Is The Karnataka BJP Candidate For Rajya Sabha Election

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭಿಸಬಹುದಾದ ಒಂದು ಸ್ಥಾನಕ್ಕೆ ಇದುವರೆಗೆ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ. ಈ ಸಂಬಂಧ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂಬ ನಿರ್ಣಯವನ್ನು ಕೈಗೊಂಡಿರುವ ಪಕ್ಷದ ರಾಜ್ಯ ಕೋರ್ ಕಮಿಟಿಯು ವರಿಷ್ಠರು ಅಭಿಪ್ರಾಯ ಕೇಳಿದರೆ ಹಲವು ಹೆಸರುಗಳನ್ನು ಪ್ರಸ್ತಾಪಿಸಲು ಮುಂದಾಗಿದೆ.

ಈ ನಡುವೆ ಭಾನುವಾರ ನಡೆದ ಕೋರ್ ಕಮಿಟಿ ಸಭೆಯ ಸಂದರ್ಭ ಈಗ ತೆರವುಗೊಳಿಸುತ್ತಿರುವ ಪಕ್ಷೇತರ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಮಾಜಿ ಸಂಸದರಾದ ವಿಜಯ್ ಸಂಕೇಶ್ವರ್, ತೇಜಸ್ವಿನಿ ಗೌಡ ಹೆಸರುಗಳು ಅನೌಪಚಾರಿಕವಾಗಿ ಚರ್ಚೆಗೆ ಬಂದಿವೆ. ಆದರೆ, ಸಮಯದ ಅಭಾವದಿಂದ ಈ ಬಗ್ಗೆ ಹೆಚ್ಚು ಚರ್ಚಿಸದೆ ವರಿಷ್ಠರ ನಿರ್ಣಯಕ್ಕೆ ಬಿಡಲು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

Follow Us:
Download App:
  • android
  • ios